
ಬೆಂಗಳೂರು(ಸೆ.18): ಕಾವೇರಿ ನ್ಯಾಯಾಧಿಕರಣ ತೀರ್ಪಿಗೆ ಪ್ರಮುಖವಾಗಿ ನಾಳೆ ಕಾವೇರಿ ಮೇಲುಸ್ತುವಾರಿ ಸಮಿತಿಯ ಮಹತ್ವದ ಸಭೆ ವರದಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಎಸ್ಆರ್ಪಿ ತುಕಾಡಿ, ಪ್ಯಾರಾ ಮಿಲಟರಿ ಪಡೆ, ಆರ್ಎಎಫ್ ತುಕಡಿಗಳು ಭದ್ರತೆಗೆ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಲಿದ್ದಾರೆ. ಎಲ್ಲಾ ವಿಭಾಗದ ಭದ್ರತೆ ಆಯಾ ವಲಯ ಡಿಸಿಪಿಗಳ ಉಸ್ತುವಾರಿಗೆ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಲಿದ್ದಾರೆ ಎಂದು ಸುವರ್ಣನ್ಯೂಸ್'ಗೆ ನಗರ ಪೊಲೀಸ್ ಆಯುಕ್ತ ಮೇಘರಿಕ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.