ನಾಳೆ ಶಾ, ಸ್ಮೃತಿ ಅಹಮದ್ ಪಟೇಲ್ ಭವಿಷ್ಯ ನಿರ್ಧಾರ

Published : Aug 07, 2017, 11:22 AM ISTUpdated : Apr 11, 2018, 12:50 PM IST
ನಾಳೆ ಶಾ, ಸ್ಮೃತಿ ಅಹಮದ್ ಪಟೇಲ್ ಭವಿಷ್ಯ ನಿರ್ಧಾರ

ಸಾರಾಂಶ

ಗುಜರಾತ್ ರಾಜ್ಯ ವಿಧಾನ ಸಭೆಯಿಂದ ರಾಜ್ಯಸಭೆಯ 3 ಸ್ಥಾನಗಳಿಗಾಗಿ ಮಂಗಳವಾರ ಚುನಾವಣೆ ನಡೆಯಲಿದೆ. 3 ಸ್ಥಾನಗಳಿಗಾಗಿ ಬಿಜೆಪಿ ಅಭ್ಯರ್ಥಿಗಳಾದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವೆ ಸ್ಮತಿ ಇರಾನಿ ಮತ್ತು ಇತ್ತೀಚೆಗಷ್ಟೇ ಕಾಂಗ್ರೆಸ್‌'ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಬಲ್ವಂತ್‌ ಸಿಂಗ್ ರಜಪೂತ್ ಕಣಕ್ಕೆ ಇಳಿದಿದ್ದಾರೆ.

ಅಹಮದಾಬಾದ್(ಆ.07): ಗುಜರಾತ್ ರಾಜ್ಯ ವಿಧಾನ ಸಭೆಯಿಂದ ರಾಜ್ಯಸಭೆಯ 3 ಸ್ಥಾನಗಳಿಗಾಗಿ ಮಂಗಳವಾರ ಚುನಾವಣೆ ನಡೆಯಲಿದೆ. 3 ಸ್ಥಾನಗಳಿಗಾಗಿ ಬಿಜೆಪಿ ಅಭ್ಯರ್ಥಿಗಳಾದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವೆ ಸ್ಮತಿ ಇರಾನಿ ಮತ್ತು ಇತ್ತೀಚೆಗಷ್ಟೇ ಕಾಂಗ್ರೆಸ್‌'ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಬಲ್ವಂತ್‌ ಸಿಂಗ್ ರಜಪೂತ್ ಕಣಕ್ಕೆ ಇಳಿದಿದ್ದಾರೆ.

ಕಾಂಗ್ರೆಸ್‌ನಿಂದ, ಪಕ್ಷದ ಅಧ್ಯಕ್ಷೆ ಸೋನಿಯಾ ಅವರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಕಣಕ್ಕೆ ಇಳಿದಿದ್ದಾರೆ. ಸದ್ಯದ ಲೆಕ್ಕಾಚಾರದ ಪ್ರಕಾರ ಅಮಿತ್ ಶಾ ಮತ್ತು ಸ್ಮತಿ ಇರಾನಿ ಆಯ್ಕೆಯಾಗುವುದು ಖಚಿತವಿದೆ. ಪಕ್ಷದಿಂದ ಲಭ್ಯವಿರುವ ಹೆಚ್ಚುವರಿ ಮತ ಮತ್ತು ಕಾಂಗ್ರೆಸ್ ಬಂಡಾಯ ಶಾಸಕರ ಮತವನ್ನು ಪಡೆದು ಬಲ್ವಂತ್‌ಸಿಂಗ್‌ ರನ್ನು ಗೆಲ್ಲಿಸುವ ತಂತ್ರಗಾರಿಕೆಯಲ್ಲಿ ಬಿಜೆಪಿ ಇದೆ. ಇದೇ ಕಾರಣಕ್ಕಾಗಿಯೇ ಕಾಂಗ್ರೆಸ್ ತನ್ನ 40ಕ್ಕೂ ಹೆಚ್ಚು ಶಾಸಕರನ್ನು ಬಿಜೆಪಿಯಿಂದ ರಕ್ಷಿಸಿಕೊಳ್ಳಲು ಕರ್ನಾಟಕಕ್ಕೆ ಕಳುಹಿಸಿಕೊಟ್ಟಿದೆ.

ಇದರ ಹೊರತಾಗಿಯೂ ಅಹಮದ್ ಪಟೇಲ್ ಸೋಲಿಸುವ ಮೂಲಕ ಸೋನಿಯಾಗೆ ಮುಜುಗರ ಉಂಟುಮಾಡಲು ಬಿಜೆಪಿ ತಂತ್ರ ರೂಪಿಸುತ್ತಿದೆ. ಅಹಮದ್ ಪಟೇಲ್ ಗೆಲ್ಲಲು ೪೫ ಮತಗಳ ಅವಶ್ಯಕತೆ ಇದೆ. ಸದ್ಯ ಕಾಂಗ್ರೆಸ್‌ನ ಬಲ ೫೧ ಮತಗಳು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Sringeri Assembly seat recount: ರಾಜೇಗೌಡ ಸೋಲು, ಶೃಂಗೇರಿ ಕ್ಷೇತ್ರಕ್ಕೀಗ ಜೀವರಾಜ್‌ ಶಾಸಕ!
ದಾವಣಗೆರೆ ಬಾಗಲಕೋಟೆ ಉಪಚುನಾವಣ ಫಲಿತಾಂಶದ ನಡುವೆಯೇ ಮಹತ್ವದ ಬೆಳವಣಿಗೆ; ಮುಂದಿನ ಸಿಎಂ ಖರ್ಗೆ? ರಾಯರಡ್ಡಿ ಹೇಳಿದ್ದೇನು?