ಗಂಗೆಗಾಗಿ 109 ದಿನಗಳ ಉಪವಾಸ: ಜಿ.ಡಿ. ಅಗರವಾಲ್ ಇನ್ನಿಲ್ಲ!

Published : Oct 11, 2018, 06:26 PM ISTUpdated : Oct 11, 2018, 07:24 PM IST
ಗಂಗೆಗಾಗಿ 109 ದಿನಗಳ ಉಪವಾಸ: ಜಿ.ಡಿ. ಅಗರವಾಲ್ ಇನ್ನಿಲ್ಲ!

ಸಾರಾಂಶ

ಗಂಗೆಗಾಗಿ ಪ್ರಾಣ ತೆತ್ತ ಸಾಮಾಜಿಕ ಹೋರಾಟಗಾರ! ನಾಲ್ಕು ತಿಂಗಳಿನಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ! 109 ದಿನಗಳ ಉಪವಾಸದ ನಂತರ ಪ್ರಾಣ ಬಿಟ್ಟ ಜಿ.ಡಿ. ಅಗರವಾಲ್! ರಿಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಅಗರವಾಲ್! ಹೃದಯಾಘಾತದಿಂದ ಅಗರವಾಲ್ ನಿಧನ! ಎರಡು ದಿನಗಳಿಂದ ನೀರನ್ನೂ ತ್ಯಜಿಸಿದ್ದ ಅಗರವಾಲ್

ನವದೆಹಲಿ(ಅ.11): ಗಂಗಾ ನದಿ ಶುದ್ದೀಕರಣಕ್ಕಾಗಿ ಆಗ್ರಹಿಸಿ ಕಳೆದ ನಾಲ್ಕು ತಿಂಗಳಿನಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಜಿ. ಡಿ. ಅಗರವಾಲ್ ಮೃತಪಟ್ಟಿದ್ದಾರೆ.

ಗಂಗಾ ನದಿ ಶುದ್ದೀಕರಣಕ್ಕೆ ಆಗ್ರಹಿಸಿ 81 ವರ್ಷದ ಅಗರವಾಲ್ ಕಳೆದ ಜೂನ್ ನಿಂದ ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ತೀವ್ರ ಅಸ್ವಸ್ಥರಾಗಿದ್ದ ಅಗರವಾಲ್ ಅವರನ್ನು ರಿಷಿಕೇಶದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಇಂದು ಅಗರವಾಲ್ ಅವರಿಗೆ ತೀವ್ರ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ. ಗಂಗಾ ನದಿ ಶುದ್ಧಿಕರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೊಳಿಸುವಂತೆ ಒತ್ತಾಯಿಸಿ ಅಗರವಾಲ್ ಕಳೆದ 109 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಕಾನ್ಪುರದ ಐಐಟಿಯಲ್ಲಿ ಪ್ರಾಧ್ಯಾಪಕರಾಗಿದ್ದ ಜಿ.ಡಿ. ಅಗರವಾಲ್, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

109 ದಿನಗಳ ತಮ್ಮ ಉಪವಾಸ ಸತ್ಯಾಗ್ರಹದಲ್ಲಿ ಜೇನು ಬೆರೆಸಿದ ನೀರನ್ನಷ್ಟೇ ಸೇವಿಸುತ್ತಿದ್ದ ಅಗರವಾಲ್, ತಮ್ಮ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ನೀರನ್ನೂ ಸೇವಿಸುವುದನ್ನು ನಿಲ್ಲಿಸಿದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಬಿಲ್ ವಿರೋಧ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಹೇಳಿದ್ದೇನು?
ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬಾಲಕಿ; ದೆಹಲಿ, ಬೆಂಗಳೂರು ಸೇರಿ 2 ವರ್ಷ ವೇಶ್ಯಾವಾಟಿಕೆ ನರಕ ದರ್ಶನ!