
ಬೆಂಗಳೂರು(ಮೇ 25): ಈ ಬಾರಿಯೂ ದಲಿತರೇ ರಾಜ್ಯ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಜಿ.ಪರಮೇಶ್ವರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ಸುವರ್ಣನ್ಯೂಸ್'ಗೆ ತಿಳಿಸಿವೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಹೈಕಮಾಂಡ್ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದೆ. ಒಂದು ವೇಳೆ ಈ ಸುದ್ದಿ ನಿಜವಾದಲ್ಲಿ, ಡಿ.ಕೆ.ಶಿವಕುಮಾರ್, ಎಂಬಿ ಪಾಟೀಲ್, ಎಸ್ಸಾರ್ ಪಾಟೀಲ್ ಮೊದಲಾದವರ ಕೆಪಿಸಿಸಿ ಪಟ್ಟದ ಕನಸು ಭಗ್ನಗೊಂಡಂತಾಗುತ್ತದೆ.
ಮೊದಲೇ ಹೇಳಿದಂತೆ, ಕರ್ನಾಟಕದಲ್ಲಿ ದಲಿತ ಮುಖಂಡರಿಗೆ ಅಧ್ಯಕ್ಷ ಪಟ್ಟ ಕೊಡುವ ಚಿಂತನೆ ಕಾಂಗ್ರೆಸ್ ಪಕ್ಷದಲ್ಲಿ ಕೆಲವಾರು ದಿನಗಳಿಂದ ಇದೆ. ಕೇಂದ್ರ ವಿಪಕ್ಷ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಗಾದಿ ಕೊಡುವ ಇಚ್ಛೆ ಸೋನಿಯಾ ಗಾಂಧಿಯವರಿಗಿತ್ತೆನ್ನಲಾಗಿದೆ. ಆದರೆ, ಖರ್ಗೆ ಸದ್ಯಕ್ಕೆ ರಾಜ್ಯ ರಾಜಕೀಯಕ್ಕೆ ಮರಳುವ ಇಚ್ಛೆ ತೋರಲಿಲ್ಲ. ಹೀಗಾಗಿ, ಮತ್ತೊಬ್ಬ ಪ್ರಮುಖ ದಲಿತ ಮುಖಂಡರೆಂದು ಪರಿಗಣಿಸಲಾದ ಜಿ.ಪರಮೇಶ್ವರ್ ಅವರನ್ನೇ ಕೆಪಿಸಿಸಿ ಗಾದಿಯಲ್ಲಿ ಮುಂದುವರಿಸುವುದು ಅನಿವಾರ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.