
ನವದೆಹಲಿ (ಏ.05): ಸಂಸದ ರವೀಂದ್ರ ಗಾಯಕ್ ವಾಡ್ ಗೆ ಇಂಡಿಯನ್ ಏರ್ ಲೈನ್ಸ್ ನಿಷೇಧ ಹೇರಿರುವ ಬಗ್ಗೆ ಪ್ರತಿಭಟನೆ ಮಾಡುವುದಾಗಿ ಶಿವಸೇನೆ ಒಂದೆಡೆ ಹೇಳಿದ್ದರೆ ಇನ್ನೊಂದೆಡೆ ಲೋಕಸಭಾ ಸ್ಪೀಕರ್ ಇಂತಹ ವಿಚಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ನನಗೆ ಅಧಿಕಾರವಿಲ್ಲ ಎಂದು ನಾಗರೀಕ ವಿಮಾನಯಾನ ಸಚಿವಾಲಯದ ನ್ಯಾಯಾಲಯದ ಅಂಗಳಕ್ಕೆ ಈ ಚೆಂಡನ್ನು ಎಸೆದಿದ್ದಾರೆ.
ಗಾಯಕ್ ವಾಡ್ ಪತ್ರವನ್ನು ನಾಗರೀಕ ವಿಮಾನಯಾನ ಸಚಿವರಾದ ಅಶೋಕ್ ಗಜಪತಿ ರಾಜುರವರಿಗೆ ಕೊಡುವಂತೆ ನನ್ನ ಸೆಕ್ರೆಟರಿಗೆ ಹೇಳಿದ್ದೇನೆ. ಅವರ ಮೇಲಿರುವ ನಿಷೇಧವನ್ನು ತೆಗೆದು ಹಾಕುವಂತೆ ಕೋರಲಾಗಿರುವ ಮನವಿಯನ್ನು ಪರಿಗಣಿಸಬೇಕೆಂದು ಕೇಳಿಕೊಳ್ಳಲಾಗಿದೆ. ನಿಷೇಧವನ್ನು ತೆಗೆದು ಹಾಕುವುದು ಅವರ ಕೈಯಲ್ಲಿದೆ ಎಂದು ಸುಮಿತ್ರಾ ಮಹಜನ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.