ವಿಮಾನ ಹತ್ತದೆ, ರೈಲಿನಲ್ಲೇ ತೆರಳಿದ ಗಾಯಕವಾಡ್‌

Published : Apr 11, 2017, 07:19 AM ISTUpdated : Apr 11, 2018, 01:04 PM IST
ವಿಮಾನ ಹತ್ತದೆ, ರೈಲಿನಲ್ಲೇ ತೆರಳಿದ ಗಾಯಕವಾಡ್‌

ಸಾರಾಂಶ

ಈ ಬಗ್ಗೆ ಮಾತನಾಡಿದ ಅವರ ಆಪ್ತ ಕಾರ್ಯದರ್ಶಿ ಕೃಷ್ಣ ನಾಮ, ‘ರವೀಂದ್ರ ಗಾಯಕ್‌ವಾಡ್‌ ಅವರು ವಿಮಾನ ಪ್ರಯಾಣಕ್ಕಿಂತ ರೈಲು ಪ್ರಯಾಣವೇ ಹೆಚ್ಚು ಅನುಕೂಲಕರ ಎಂದು ಪರಿಗಣಿಸಿದ್ದಾರೆ. ಹಾಗಾಗಿ, ಅವರು ರೈಲಿನಲ್ಲೇ ತೆರಳಿದ್ದಾರೆ' ಎಂದು ಸ್ಪಷ್ಟಪಡಿಸಿದರು.

ಪುಣೆ: ಏರ್‌ ಇಂಡಿಯಾ ಹಿರಿಯ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ್ದ ಶಿವಸೇನೆ ಸಂಸದ ರವೀಂದ್ರ ಗಾಯಕ್‌ವಾಡ್‌ ಸೋಮವಾರದ ಸಂಸತ್ತಿನ ಕಲಾಪಕ್ಕೆ ಹಾಜರಾಗಲು ಮುಂಬೈನಿಂದ ನವದೆಹಲಿಗೆ ಏರ್‌ ಇಂಡಿಯಾ ವಿಮಾನ ಟಿಕೆಟ್‌ ಕಾಯ್ದಿರಿಸಿದ ಹೊರತಾಗಿಯೂ, ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲೇ ರಾಜಧಾನಿಗೆ ತೆರಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರ ಆಪ್ತ ಕಾರ್ಯದರ್ಶಿ ಕೃಷ್ಣ ನಾಮ, ‘ರವೀಂದ್ರ ಗಾಯಕ್‌ವಾಡ್‌ ಅವರು ವಿಮಾನ ಪ್ರಯಾಣಕ್ಕಿಂತ ರೈಲು ಪ್ರಯಾಣವೇ ಹೆಚ್ಚು ಅನುಕೂಲಕರ ಎಂದು ಪರಿಗಣಿಸಿದ್ದಾರೆ. ಹಾಗಾಗಿ, ಅವರು ರೈಲಿನಲ್ಲೇ ತೆರಳಿದ್ದಾರೆ' ಎಂದು ಸ್ಪಷ್ಟಪಡಿಸಿದರು.

ಏರ್ ಇಂಡಿಯಾ ಅದಿಕಾರಿ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆಮ ಕಾರಣಕ್ಕೆ ಏರ್ ಇಂಡಿಯಾ ಹಾಗೂ ಖಾಸಗಿ ವಿಮಾನಯಾನ ಸಂಸ್ಥೆಗಳು ಗಾಯಕ್ವಾಡ್'ಗೆ ನಿಷೇಧ ಹೇರಿದ್ದವು. ಬಳಿಕ ಸರ್ಕಾರದ ಆದೇಶದಂತೆ ನಿಷೇಧವನ್ನು ಹಿಂಪಡೆಯಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ
ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ