
ಬೆಂಗಳೂರು(ಮಾ.13): ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಶಪಡಿಕೊಂಡಿದ್ದ ಗಾಲಿ ಜನಾರ್ದನ ರೆಡ್ಡಿಯ 884 ಕೋಟಿ ರೂ. ಮೊತ್ತದ ಆಸ್ತಿಯನ್ನು ವಾಪಸ್ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 2011 ರಲ್ಲಿ ಜಾರಿ ನಿರ್ದೇಶನಾಲವು ಜನಾರ್ದನ ರೆಡ್ಡಿ ಮನೆ, ಹೆಲಿಕಾಪ್ಟರ್ ಇತ್ಯಾದಿ ಸೇರಿದಂತೆ 884 ಕೋಟಿ ರೂಪಾಯಿ ಮೊತ್ತದ ಆಸ್ತಿ ಜಪ್ತಿ ಮಾಡಿಕೊಂಡಿತ್ತು. ನ್ಯಾಯಾಲಯವು ರೆಡ್ಡಿ ವಿರುದ್ಧದ ಇಡಿ, ಒಎಂಸಿ, ಬ್ರಹ್ಮಿಣಿ ಸ್ಟೀಲ್, ಲಕ್ಷ್ಮಿ ಅರುಣಾ ವಿರುದ್ಧ ಪ್ರಕರಣಗಳನ್ನು ರದ್ದು ಪಡಿಸಿದೆ.
2004 - 2006 ರ ನಡುವೆ ಅಕ್ರಮ ಗಣಿಗಾರಿಕೆ ನಡೆದಿತ್ತು. ಆದರೆ 2009 ರಲ್ಲಿ ಪಿಎಂಎಲ್ ಕಾಯ್ದೆ ತಿದ್ದುಪಡಿಯಾಗಿತ್ತು. ಕಾಯ್ದೆ ಪೂರ್ವಾನ್ವಯ ಸಾಧ್ಯವಿಲ್ಲವೆಂದು ಹೈಕೋರ್ಟ್ ತೀರ್ಪು ನೀಡಿದೆ. ಆಸ್ತಿ ವಾಪಸ್ ನೀಡುವಂತೆ ಗಾಲಿ ಜನಾರ್ದನ ರೆಡ್ಡಿ ಹೈಕೋರ್ಟ್ ಮೋರೆ ಹೋಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.