'ಸಿದ್ದರಾಮಯ್ಯ ನನ್ನ ಬಳಿ ಬಿಕ್ಷೆ ಬೇಡಿದರೆ ಎಡಗೈನಲ್ಲಿ ಬಿಕ್ಷೆ ನೀಡುತ್ತೇನೆ': ಜನಾರ್ಧನ ರೆಡ್ಡಿ

Published : Jan 14, 2018, 09:26 PM ISTUpdated : Apr 11, 2018, 12:58 PM IST
'ಸಿದ್ದರಾಮಯ್ಯ ನನ್ನ ಬಳಿ ಬಿಕ್ಷೆ ಬೇಡಿದರೆ ಎಡಗೈನಲ್ಲಿ ಬಿಕ್ಷೆ ನೀಡುತ್ತೇನೆ': ಜನಾರ್ಧನ ರೆಡ್ಡಿ

ಸಾರಾಂಶ

ನಗರದಲ್ಲಿ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರೆಡ್ಡಿ, 'ಸುಳ್ಳು ಆರೋಪಗಳನ್ನು ಮಾಡಿ 42 ತಿಂಗಳು ನನ್ನ ಜೈಲಿನಲ್ಲಿ ಇರಿಸಿದ್ದ ಕಾಂಗ್ರೆಸ್, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗಲೂ ನನ್ನನ್ನು ಏನು ಮಾಡಿಕೊಳ್ಳುವುದಕ್ಕೂ ಸಾಧ್ಯವಾಗಲಿಲ್ಲ, ನನ್ನಿಂದ ಬಿಡಿಗಾಸು ರಿಕವರಿ ಮಾಡಲು ಸಾಧ್ಯವಾಗಿಲ್ಲ' ಎಂದು ವ್ಯಂಗ್ಯವಾಡಿದರು.

ಆನೇಕಲ್(ಜ.14): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ನನ್ನಿಂದ ಬಿಡಿಗಾಸು ಸಹ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅಥವಾ ಕಾಂಗ್ರೆಸ್ ಪಕ್ಷದವರು ನನ್ನ ಬಳಿ ಬಿಕ್ಷೆ ಬೇಡಿದರೆ ಎಡಗೈನಲ್ಲಿ ಬಿಕ್ಷೆ ನೀಡುತ್ತೇನೆಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಸಂಕ್ರಾಂತಿ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರೆಡ್ಡಿ, 'ಸುಳ್ಳು ಆರೋಪಗಳನ್ನು ಮಾಡಿ 42 ತಿಂಗಳು ನನ್ನ ಜೈಲಿನಲ್ಲಿ ಇರಿಸಿದ್ದ ಕಾಂಗ್ರೆಸ್, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗಲೂ ನನ್ನನ್ನು ಏನು ಮಾಡಿಕೊಳ್ಳುವುದಕ್ಕೂ ಸಾಧ್ಯವಾಗಲಿಲ್ಲ, ನನ್ನಿಂದ ಬಿಡಿಗಾಸು ರಿಕವರಿ ಮಾಡಲು ಸಾಧ್ಯವಾಗಿಲ್ಲ' ಎಂದು ವ್ಯಂಗ್ಯವಾಡಿದರು.

ಮುಂದೆ ದೇವರ ಆಶಿರ್ವಾದ ಸಿಕ್ಕರೆ, ಬಿಜೆಪಿ ಪಕ್ಷ ಟಿಕೆಟ್ ಕೊಟ್ಟರೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಯಾವ ದುಸ್ಥಿಗೆ ತರುತ್ತೇನೆ ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇವೇಳೆ ಇನ್ಮುಂದೆ ನಾನು ಸಾಯುವವರೆಗೂ ರೈತನ ಪೋಷಾಕು ಪಂಚೆಯನ್ನೇ ಧರಿಸುತ್ತೇನೆಂದು ರೆಡ್ಡಿ ಘೋಷಣೆ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ UPI ಮೂಲಕ PF ಹಣ ಹಿಂಪಡೆಯಬಹುದು; ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್‌!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿದ 8 ಬಡಾವಣೆಗಳನ್ನು ಜಿಬಿಎಗೆ ಒಪ್ಪಿಸುವಂತೆ ಆದೇಶ