ನವದೆಹಲಿ[ಅ. 01] ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪಾಕಿಸ್ತಾನ ಆಹ್ವಾನ ನೀಡಿದ ವಿಚಾರವನ್ನು ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಬೌಂಡರಿಯಿಂದ ಆಚೆ ಕಳಿಸಿದ್ದಾರೆ.
ಪಾಕಿಸ್ತಾನದ ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗಾಗಿ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಆಹ್ವಾನವನ್ನು ನೀಡಲು ಪಾಕಿಸ್ತಾನ ನಿರ್ಧರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಮಹಮೂದ್ ಖುರೇಷಿ ಹೇಳಿದ್ದರು. ಆದರೆ ಈ ಆಹ್ವಾನವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿತ್ತು.
2007ರ ಟಿ 20 ವಿಶ್ವಕಪ್ ಗೆಲ್ಲಿಸಿಕೊಟ್ಟ ಹೀರೋಗಳು
ಇಮ್ರಾನ್ ಖಾನ್ ಚಾಣಾಕ್ಷ ನಡೆಗೆ ಅದಕ್ಕಿಂತಲೂ ಚಾಣಾಕ್ಷ ರೀತಿ ಉತ್ತರ ನೀಡಿರುವ ಗಂಭೀರ್, ಇದೊಂದು ಪಕ್ಕಾ ರಾಜಕೀಯ ಹೆಜ್ಜೆ.. ಮನಮೋಹನ್ ಸಿಂಗ್ ಅವರನ್ನು ಕಳಿಸುವುದೋ, ಬಿಡುವುದೋ ಎಂಬ ನಿರ್ಧಾರವನ್ನು ಕಾಂಗ್ರೆಸ್ ಪಾರ್ಟಿ ಮಾಡಬೇಕಿದೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕ ಒಂದು ಕಾಲದ ಕ್ರಿಕೆಟರ್ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ಹಿಂದೆ ಭೇಟಿ ನೀಡಿ ಅಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿನ ಸೈನ್ಯದ ನಾಯಕನ ಅಪ್ಪಿಕೊಂಡಿದ್ದರು ಎಂಬುದನ್ನು ಉಲ್ಲೇಖ ಮಾಡಲು ಗಂಭೀರ್ ಮರೆತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.