ಜನಪ್ರತಿನಿಧಿಗಳ ನಿರ್ಲಕ್ಷ್ಯ: ರಾಷ್ಟ್ರಪಿತನ ಸ್ಮಾರಕಕ್ಕೆ ಇನ್ನೂ ಸಿಗದ ಕಾಯಕಲ್ಪ

Published : Oct 02, 2016, 02:59 AM ISTUpdated : Apr 11, 2018, 12:41 PM IST
ಜನಪ್ರತಿನಿಧಿಗಳ ನಿರ್ಲಕ್ಷ್ಯ: ರಾಷ್ಟ್ರಪಿತನ ಸ್ಮಾರಕಕ್ಕೆ ಇನ್ನೂ ಸಿಗದ ಕಾಯಕಲ್ಪ

ಸಾರಾಂಶ

ಗದಗ (ಅ.02):ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತನಿಗೆ ಇನ್ನೂ ಸರಿಯಾದ ಗೌರವ ಸಿಕ್ಕಿಲ್ಲ  ಎಂದರೆ ತಪ್ಪಾಗಲಾರದು. ಗದಗದ ಬೆಟಗೇರಿಯ ನೇಕಾರರ ಓಣಿಯ ಗಾಂಧಿ ಕಟ್ಟಡವನ್ನು ನೋಡಿದಾಗ ನಿಜಕ್ಕೂ ಮನಸಿಗೆ ಖೇದವುಂಟಾಗುವುದರಲ್ಲಿ ಸಂಶಯವಿಲ್ಲ. ಕಟ್ಟಡದ ಕಾಮಗಾರಿ ಶುರುವಾಗಿ ವರ್ಷಗಳೇ ಉರುಳಿದರೂ ಪೂರ್ಣಗೊಳ್ಳದೇ ನೆನಗುದಿಗೆ ಬಿದ್ದಿದೆ. ಆದರೆ ಜನ ಮಾತ್ರ ಮಹಾತ್ಮರಿಗೆ ನಿತ್ಯ ಪೂಜೆ ಸಲ್ಲಿಸುವುದನ್ನು ಮರೆತಿಲ್ಲ.

ಸ್ವಂತಂತ್ರ್ಯ ಪೂರ್ವದಲ್ಲಿ ಮಹಾತ್ಮ ಗಾಂಧಿ ಬಂದು ಜನಾಂದೋಲನ ಮಾಡಿದ ಸ್ಥಳವಿದು. 1944ರಲ್ಲಿ ಗಾಂಧಿಜೀಯವರು ಗದಗಿಗೆ ಭೇಟಿ ಕೊಟ್ಟಿದ್ದ ವೇಳೆ ಬೆಟಗೇರಿಯ ನೇಕಾರರ ಓಣಿಗೂ ಬಂದಿದ್ದರು. ಇದೇ ನೆನಪಿನಲ್ಲಿ ರಾಷ್ಟ್ರಪಿತನ ಮರಣದ ನಂತರ ಅವರ ಚಿತಾಭಸ್ಮ ತಂದಿಟ್ಟು ಒಂದು ಸ್ಮಾರಕವನ್ನು ನಿರ್ಮಿಸಿ ನಿತ್ಯ ಪೂಜೆ ಸಲ್ಲಿಸುತ್ತಾರೆ.

ಹಲವು ಕಾರಣಗಳಿಂದ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತು ಹೋಯಿತು. ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಇತ್ತ ಸುಳಿದಿಲ್ಲ ಅಂತ ಸ್ಥಳೀಯರು ಆರೋಪಿಸಿದ್ದಾರೆ. ಗಾಂಧಿ ಪ್ರತಿಮೆಯನ್ನು ನಗರಸಭೆಯಲ್ಲಿ  ತಂದಿಟ್ಟು ಮೂರು ವರ್ಷ ಕಳೆದಿವೆ. ಗಾಂಧಿಗುಡಿ ಜೀರ್ಣೋದ್ಧಾರ ಮಾಡಿ ಪ್ರತಿಷ್ಠಾಪಿಸಲು ಯಾರೂ ಕೂಡ ಮುಂದಾಗುತ್ತಿಲ್ಲ.

ಹಲವು ಯೋಜನೆಗಳಿಗೆ ಸಾಕಷ್ಟು ಹಣ ಹಲವು ರೀತಿ ಪೋಲು ಆಗುತ್ತದೆ. ಆದರೆ  ಜನಪ್ರತಿನಿಧಿಗಳು ಸಾರ್ಥಕ ವ್ಯಕ್ತಿಗಳ ಸ್ಮಾರಕ ಪೂರ್ಣಗೊಳಿಸಿದರೆ ಮಹಾತ್ಮನಿಗೆ ಗೌರವ ನೀಡಿದಂತಾಗುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!