ಗಂಗಾ ನೀರು ಸ್ನಾನಕ್ಕೂ ಯೋಗ್ಯವಲ್ಲ, ಇದು ಭಾರತೀಯರ ನಂಬಿಕೆ ಪ್ರಶ್ನೆ

Published : Jul 27, 2018, 09:09 PM IST
ಗಂಗಾ ನೀರು ಸ್ನಾನಕ್ಕೂ ಯೋಗ್ಯವಲ್ಲ, ಇದು ಭಾರತೀಯರ ನಂಬಿಕೆ ಪ್ರಶ್ನೆ

ಸಾರಾಂಶ

ಒಂದೆಡೆ ಕೇಂದ್ರ ಸರಕಾರ ನಾವು ಗಂಗಾ ನದಿಯನ್ನು ಶುದ್ಧ ಮಾಡುತ್ತೇವೆ. ಅದಕ್ಕಾಗಿ ಯೋಜನೆ ರೂಪಿಸಿ ಕಾರ್ಯಗತ ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದರೆ ಇದಕ್ಕೆ ವ್ಯತಿರಿಕ್ತವಾದ ಅಭಿಪ್ರಾಯ ಹೊರಬಿದ್ದಿದೆ. ಭಾರತೀಯರು ಗಂಗಾ ನದಿ ನೀರನ್ನು ಪವಿತ್ರ ಎಂದು ಭಾವಿಸಿರುವ ನಂಬಿಕೆಗೆ ಘಾಸಿಯಾಗುವಂತಹ ವಿಚಾರ ಹೊರಬಿದ್ದಿದೆ.

ನವದೆಹಲಿ[ಜು.27] ಪವಿತ್ರ ನದಿ ಗಂಗೆಯ ನೀರು ಕುಡಿಯಲಿಕ್ಕೆ ಇರಲಿ ಅಥವಾ ಸ್ನಾನಕ್ಕೂ ಯೋಗ್ಯವಾಗಿಲ್ಲ ಎಂದು  ರಾಷ್ಟ್ರೀಯ ಹಸಿರು ಪೀಠ ಹೇಳಿದೆ. ಹರಿದ್ವಾರದಿಂದ ಉತ್ತರ ಪ್ರದೇಶದ ಉನ್ನಾವೋ ವರೆಗಿನ ಗಂಗಾ ನದಿಯ ನೀರು ಕುಡಿಯಲು, ಸ್ನಾನ ಹಾಗೂ ಇತರೆ ಬಳಕೆಗೆ ಅರ್ಹವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದೆ.

ಏನು ಅರಿಯದ ಜನರು ಇದೇ ನೀರನ್ನು ಎಲ್ಲ ಕೆಲಸಗಳಿಗೆ ಬಳಕೆ ಮಾಡುತ್ತಾರೆ. ಸಿಗರೇಟ್ ಪ್ಯಾಕ್ ಗಳಲ್ಲಿ ಹೇಗೆ ಎಚ್ಚರಿಕೆ ಸಂದೇಶವಿರುತ್ತದೆಯೋ ಹಾಗೆಯೇ ನದಿಯ ನೀರಿನ ಬಗೆಗೆ ಸಹ ಎಚ್ಚರಿಕೆ ಸಂದೇಶ ಸಾರಬೇಕಾಗುತ್ತದೆ ಎಂದು ವ್ಯಂಗ್ಯವಾಡಿದೆ.

ರಾಷ್ಟ್ರೀಯ ಹಸಿರು ಪೀಠ [ಎನ್ಜಿಟಿ] ಮುಖ್ಯಸ್ಥ ಎ.ಕೆ. ಗೋಯೆಲ್ ನೇತೃತ್ವದ ಪೀಠವು ಗಂಗಾ ನದಿ ನೀರಿನ ಪರಿಶುದ್ಧತೆ ಬಗೆಗೆ ಆತಂಕ ವ್ಯಕ್ತಪಡಿಸಿದೆ. ಅಲ್ಲದೆ ನದಿಯಿಂದ ನೂರು ಮೀಟರ್ ಅಂತರದಲ್ಲಿ ಎಚ್ಚರಿಕೆ ಫಲಕ ಅಳವಡಿಸುವಂತೆ ಕ್ಲೀನ್ ಗಂಗಾ ರಾಷ್ಟ್ರೀಯ ಮಿಷನ್ (ಎನ್ ಎಂಸಿಜಿ) ಗೆ ನಿರ್ದೇಶನ ನೀಡಿರುವುದು ಚರ್ಚೆಗೆ ಕಾರಣವಾಗಿದೆ.

ಎರಡು ವಾರಗಳೊಳಗೆ ತಮ್ಮ ಅಧಿಕೃತ ವೆಬ್ ಸೈಟ್ ಗಳಲ್ಲಿ ಗಂಗೆಯಲ್ಲಿ ಸ್ನಾನ ಹಾಗೂ ಕುಡಿಯುವುದಕ್ಕೆ ಯೋಗ್ಯವಾದ ನೀರು ಎಲ್ಲೆಲ್ಲಿ ಸಿಗಲಿದೆ ಎನ್ನುವ ಕುರಿತು ಒಂದು ನಕ್ಷೆಯನ್ನು ಅಳವಡಿಸಬೇಕು ಎಂದು ಪೀಠ ಹೇಳಿರುವುದು ಒಂದರ್ಥದಲ್ಲಿ ಕೇಂದ್ರ ಸರಕಾರಕ್ಕೆ ಮುಜಗರ ತಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಳೆ ಅರ್ಧ ಬೆಂಗಳೂರಿಗೆ ನೀರು ಪೂರೈಕೆ ಸ್ಥಗಿತ: ಕಾವೇರಿ 5ನೇ ಹಂತದ ಪೈಪ್‌ಲೈನ್‌ನಲ್ಲಿ ಸೋರಿಕೆ!
ಚಿನ್ನದ ಬೆಲೆ ಲಕ್ಷ ದಾಟಿದ ಬೆನ್ನಲ್ಲೇ ಕರ್ನಾಟಕದ ಈ ಜಿಲ್ಲೆಗೆ ಜಾಕ್‌ಪಾಟ್‌, ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆ!