
ಗುವಾಹಟಿ: ಆಧ್ಯಾತ್ಮಿಕ ಗುರು ರವಿಶಂಕರ್ ಗುರೂಜಿಯವರನ್ನು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಖುದ್ದು ಡ್ರೈವ್ ಮಾಡಿಕೊಂಡು ಕರೆದುಕೊಂಡು ಹೋಗಿದ್ದು, ವಕೀಲರ ಸಂಘದ ಸದಸ್ಯರಿಂದ ವಿರೋಧ ವ್ಯಕ್ತವಾಗಿದೆಯೆಮದು ವರದಿಯಾಗಿದೆ.
ಕಳೆದ ಸೆ.5ರಂದು ನಡೆದ ಈಶಾನ್ಯ ಭಾರತದ ಬುಡಕಟ್ಟು ಜನರ ಸಮಾವೇಶದಲ್ಲಿ ಭಾಗವಹಿಸಲು ಗುವಾಹಟಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ರವಿಶಂಕರ್ ಗುರೂಜಿಯವರನ್ನು ಸಿಜೆ ಅರ್ಜಿತ್ ಸಿಂಗ್ ಖುದ್ದು ಡ್ರೈವ್ ಮಾಡಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆನ್ನಲಾಗಿದೆ.
ಆದರೆ ಮುಖ್ಯ ನ್ಯಾಯಾಧಿಶರ ಈ ಕ್ರಮ ಹೈಕೋರ್ಟ್ ನಿಯಮಗಳ ಉಲ್ಲಂಘನೆಯಾಗಿದೆಯೆಂದು ಗುವಾಹಟಿ ಹೈಕೋರ್ಟ್ ಬಾರ್ ಅಸೋಸಿಯೇಶನ್’ನ ಕೆಲವು ಸದಸ್ಯರು ಅಕ್ಷೇಪ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ.
ಮುಂದಿನ ಮಹಾಸಭೆಯಲ್ಲಿ ಈ ವಿಷಯದ ಕುರಿತು ಚರ್ಚಿಸುವುದಾಗಿ ಹಾಗೂ ಸುಪ್ರೀಂ ಕೋರ್ಟ್’ನ ಮುಖ್ಯ ನ್ಯಾಯಾಧೀಶರಿಗೆ ದೂರು ಸಲ್ಲಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆಂದು ವರದಿಯಾಗಿದೆ. (ಚಿತ್ರಕೃಪೆ:ಟೈಮ್ 8)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.