ಗೌರಿ ಹತ್ಯೆ ತನಿಖೆ : ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದ್ರಜಿತ್ ಲಂಕೇಶ್ ಗರಂ

Published : Jan 29, 2018, 05:15 PM ISTUpdated : Apr 11, 2018, 12:55 PM IST
ಗೌರಿ ಹತ್ಯೆ ತನಿಖೆ : ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದ್ರಜಿತ್ ಲಂಕೇಶ್ ಗರಂ

ಸಾರಾಂಶ

ರಾಜಕೀಯ ಕೋನದಿಂದ ಮಾತ್ರ ತನಿಖೆ,  ನಿರೀಕ್ಷೆಯೆಲ್ಲ ಹುಸಿಯಾಗಿದೆ ಸಿಬಿಐ ತನಿಖೆಗಾಗಿ ಹೈಕೋರ್ಟ್ ಮೆಟ್ಟಿಲೇರಲು ನಿರ್ಧಾರ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ತನಿಖೆಗೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಹೋದರ ಇಂದ್ರಜಿತ್ ಲಂಕೇಶ್ ಹರಿಹಾಯ್ದಿದ್ದಾರೆ.  

‘ಗೌರಿ ಹತ್ಯೆಯಾಗಿ 5 ತಿಂಗಳುಗಳಾದರೂ ತನಿಖೆಯು ನಿಂತ ನೀರಾಗಿದೆ, ರಾಜಕೀಯವಾಗಿ ಒಂದೇ ಕೋನದಿಂದ ತನಿಖೆಯಾಗುತ್ತಿದೆ. ಮಾಧ್ಯಮ ಸಲಹೆಗಾರರ ಮೂಲಕ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳನ್ನು ಮಾಡಿ ಕೇಂದ್ರ ಸರ್ಕಾರವನ್ನು ಬೈಯುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ  ಪ್ರಶ್ನೆ ಮಾಡೋದನ್ನು ಬಿಟ್ಟು ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿರುವುದು ನನಗೆ ಜೀರ್ಣವಾಗುತ್ತಿಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನಿಖೆಯಲ್ಲಿ ರಾಜಕೀಯ ನಡೆಯುತ್ತಿದೆ. ಸರ್ಕಾರದ ಒತ್ತಡದಿಂದ ಒಂದೇ ದಿಕ್ಕಿನಲ್ಲಿ ತನಿಖೆಯಾಗುತ್ತಿದೆ. ನಿರೀಕ್ಷೆಯೆಲ್ಲ ಹುಸಿಯಾಗಿದೆ. ತನಿಖೆಯ ಮೇಲೆ ವಿಶ್ವಾಸವಿಲ್ಲವಾಗಿದೆ.  ಆದುದರಿಂದ ನಿವೃತ್ತ ಜಡ್ಜ್ ಅಥವಾ ಸಿಬಿಐ ತನಿಖೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇನೆ, ಎಂದು ಸುವರ್ಣನ್ಯೂಸ್’ಗೆ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Funky Movie: ತೆಲುಗು ಸ್ಟಾರ್ ನಾಯಕರ ಚಿತ್ರಗಳಿಗೆ ಪೈಪೋಟಿ; ಹೆಸರೇ ಸೂಚಿಸುವಂತೆ ನಗುವಿನ ಸುರಿಮಳೆ ಗ್ಯಾರಂಟಿ!
ತಲೆಗೆ ಒಟ್ಟು 1.61 ಕೋಟಿ ಬಹುಮಾನ ಘೋಷಿಸಲ್ಪಟ್ಟಿದ್ದ 51 ಮಾವೋವಾದಿ ನಕ್ಸಲರ ಶರಣಾಗತಿ