ಗೌರಿ ಲಂಕೇಶ್ ಹತ್ಯೆ ಪ್ರಕರಣ : ಹೊಟ್ಟೆ ಮಂಜ ಬಾಯ್ಬಿಟ್ಟ ಸತ್ಯವೇನು..?

Published : Mar 09, 2018, 08:31 AM ISTUpdated : Apr 11, 2018, 01:12 PM IST
ಗೌರಿ ಲಂಕೇಶ್ ಹತ್ಯೆ ಪ್ರಕರಣ : ಹೊಟ್ಟೆ ಮಂಜ ಬಾಯ್ಬಿಟ್ಟ ಸತ್ಯವೇನು..?

ಸಾರಾಂಶ

ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹೊಟ್ಟೆ ಮಂಜನ ವಿಚಾರಣೆ ನಡೆದಿದೆ. ಎಸ್ಐಟಿಯಿಂದ ವಿಚಾರಣೆ ನಡೆಸಲಾಗಿದ್ದು, ಪದೇ ಪದೇ ಕೇಳಿದ ಪ್ರಶ್ನೆಗಳನ್ನೇ ಕೇಳಿ ಗೊಂದಲ ಸೃಷ್ಟಿಸಿ ಆತನ ಬಾಯಿ ಬಿಡಿಸುವ ಯತ್ನ ಮಾಡಲಾಗಿದೆ.

ಬೆಂಗಳೂರು : ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹೊಟ್ಟೆ ಮಂಜನ ವಿಚಾರಣೆ ನಡೆದಿದೆ. ಎಸ್ಐಟಿಯಿಂದ ವಿಚಾರಣೆ ನಡೆಸಲಾಗಿದ್ದು, ಪದೇ ಪದೇ ಕೇಳಿದ ಪ್ರಶ್ನೆಗಳನ್ನೇ ಕೇಳಿ ಗೊಂದಲ ಸೃಷ್ಟಿಸಿ ಆತನ ಬಾಯಿ ಬಿಡಿಸುವ ಯತ್ನ ಮಾಡಲಾಗಿದೆ.

ಈ ವೇಳೆ ಆತ ಬೇರೆ ಬೇರೆ ರೀತಿಯಲ್ಲಿಯೇ ಉತ್ತರ ನೀಡಿ ತನಿಖೆಯನ್ನು ಕೂಡ ಗೊಂದಲಕ್ಕೆ ಈಡು ಮಾಡಿದ್ದ ಎನ್ನಲಾಗಿದೆ.  ಗೌರಿ ಕೇಸ್ ನಲ್ಲಿ ಹೊಟ್ಟೆ ಮಂಜನ ಲಿಂಕ್ ಪತ್ತೆಗೆ ಪೊಲೀಸರು ಹರಸಾಹಸ ಮಾಡಿದ್ದು, ತಲೆನೋವಾಗಿದ್ದ ನವೀನ್​​ ವಿಚಾರಣೆ ಯಶಸ್ವಿಯಾಗಿ ಮುಗಿಸಲಾಗಿದೆ.

ಸತ್ಯ ಪತ್ತೆಗೆ ಸೀಕ್ರೆಟ್ ಆಪರೇಷನ್!

ಆತನಿಂದ ಸತ್ಯವನ್ನು ಹೊರತರುವ ಸಲುವಾಗಿ ಸೀಕ್ರೇಟ್ ಆಪರೇಷನ್ ಮಾಡಲಾಗಿದೆ. ಹೊಟ್ಟೆ ಮಂಜನಿಂದ ಸತ್ಯ ಬಾಯಿಬಿಡಿಸಲು ಅಧಿಕಾರಿಗಳು ಹರಸಾಹಸ ಮಾಡಿದ್ದಾರೆ. ಈ ವೇಳೆ ತನಿಖಾಧಿಕಾರಿಗಳ ಮಾಸ್ಟರ್ ಪ್ಲಾನ್​​ ಮಾಡಿದ್ದು, ಮೈಂಡ್ ಗೇಮ್ ತಂತ್ರದ ಮೂಲಕ ಹೊಟ್ಟೆ ಮಂಜನಿಂದ ಸತ್ಯ ಬಾಯ್ಬಿಡಿಸಲು ಯಶಸ್ವಿಯಾಗಿದ್ದಾರೆ.

ಆಪರೇಷನ್ ರಚಿತಾ

ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ಪ್ರಕರಣಕ್ಕೆ ರಚಿತಾ ಎಂಬ ಅಧಿಕಾರಿ ಎಂಟ್ರಿಯಾಗಿದ್ದು, ಎಸ್ಐಟಿ ವಿಚಾರಣಾ ಪ್ರಕ್ರಿಯೆಗೆ ಸಿಬಿಐ ಜಂಟಿ ನಿರ್ದೇಶಕಿಯಾಗಿರುವ  ಡಾ.ರಚಿತಾ ಶೆಟ್ಟಿ ನೆರವು ನೀಡಿದ್ದಾರೆ.   ಅರ್ಧ ಗಂಟೆ ಆಪರೇಷನ್ ಮೂಲಕ ರಚಿತಾ ವಿವಿಧ ಪ್ರಶ್ನೆ ಕೇಳುವ ಮೂಲಕ ಆತನನ್ನು ಬಾಯಿ ಬಿಡಿಸಿದ್ದಾರೆ. ಪೊಲೀಸ್ ಟ್ರೀಟ್ ಮೆಂಟ್ ಹಾಗೂ ಅಧಿಕಾರಿ ರಚಿತಾ ಅವರು ಮಂಜನನ್ನು ಬಾಯಿ ಬಿಡಿಸಿದ್ದು, ಕೊನೆಗೂ ಆತನ ಗೌರಿ ಹಂತಕರಿಗೂ ತನಗೂ ಪರಿಚಯ ಇರುವುದಾಗಿ ಒಪ್ಪಿಕೊಂಡಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಂಟೋನ್ಮೆಂಟ್‌ ರೈಲು ನಿಲ್ದಾಣದ 371 ಮರ ಕಡಿಯಲು ಹೈಕೋರ್ಟ್‌ ತಡೆ, ತನ್ನ ಅನುಮತಿ ಇಲ್ಲದೆ ಏನೂ ಮಾಡುವಂತಿಲ್ಲವೆಂದು ಆರ್ಡರ್
ಸ್ಕೂಲ್ ಬಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ; 20 ವಿದ್ಯಾರ್ಥಿಗಳಿದ್ದ ಶಾಲಾ ವಾಹನ ಪಲ್ಟಿ!