
ನವದೆಹಲಿ(ಏ.25): ಕಳಪೆ ಪ್ರದರ್ಶನದ ಕಾರಣದಿಂದ ಡೆಲ್ಲಿ ಡೇರ್'ಡೇವಿಲ್ಸ್ ನಾಯಕತ್ವ ಸ್ಥಾನಕ್ಕೆ ಗೌತಮ್ ಗಂಭೀರ್ ರಾಜೀನಾಮೆ ನೀಡಿದ್ದಾರೆ.
ಐಪಿಎಲ್'ನ ಈ ಆವೃತ್ತಿಯಲ್ಲಿ ದೆಲ್ಲಿ ಡೇರ್'ಡೇವಿಲ್ಸ್ ತಂಡ 6 ಪಂದ್ಯಗಳಲ್ಲಿ 5ರಲ್ಲಿ ಸೋಲು ಅನುಭವಿಸಿತ್ತು. ಬ್ಯಾಟ್ಸ್'ಮೆನ್ ಆಗಿಯೂ ಕಳಪೆ ಪ್ರದರ್ಶನ ನೀಡಿದ್ದರು. ಕಳೆದ 6 ಪಂದ್ಯಗಳಲ್ಲಿ ಕೇವಲ 85 ರನ್ ಮಾತ್ರ ದಾಖಲಿಸಿದ್ದರು. ಗಂಭೀರ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಶ್ರೇಯಸ್ ಅಯ್ಯರ್ ನೂತನ ನಾಯಕನಾಗಿ ನೇಮಕವಾಗಿದ್ದಾರೆ.
ಗಂಭೀರ್ ಈ ಮೊದಲು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿದ್ದರು. ಹರಾಜಿನಲ್ಲಿ ಕೋಲ್ಕತ್ತಾ ತಂಡ ಖರೀದಿಸದ ಕಾರಣ ಡೆಲ್ಲಿ ತಂಡ 36 ವರ್ಷದ ಆಟಗಾರರನ್ನು 2.80 ಕೋಟಿಗೆ ಖರೀದಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.