
ಮೊಹಾಲಿ: ಕಳೆದ ವರ್ಷದ ಅಪನಗದೀಕರಣದ ಸಾಹಸದಿಂದ ಭಾರತದ ಆರ್ಥಿಕತೆ ಕುಸಿತದ ಹಾದಿ ಹಿಡಿದಿದೆ. ಅಪನಗದೀಕರಣದ ಘೋಷಣೆಯ ಅಗತ್ಯವೇ ಇರಲಿಲ್ಲ ಎಂದು ಮೋದಿ ಸರ್ಕಾರ ವಿರುದ್ಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹರಿಹಾಯ್ದಿದ್ದಾರೆ.
ಇಲ್ಲಿ ಮಾತನಾಡಿದ ಮನಮೋಹನ್ ಸಿಂಗ್, ಕೆಲವು ಲ್ಯಾಟಿನ್ ಅಮೆರಿಕದ ರಾಷ್ಟ್ರಗಳನ್ನು ಹೊರತುಪಡಿಸಿ ಉಳಿದ ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ನೋಟು ಅಪನಗದೀಕರಣ ಯಶಸ್ವಿಯಾಗಿಲ್ಲ. ಇದರ ಅಗತ್ಯತೆ ಇರಲಿಲ್ಲ. ನಾನು ಕೆಲವು ತಿಂಗಳ ಹಿಂದೆ ಊಹಿಸಿದಂತೆಯೇ ಅಪನಗದೀಕರಣದ ಪರಿಣಾಮ ಆರ್ಥಿಕತೆ ಕುಸಿದಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.