
ಚಾಮರಾಜನಗರ(ಏ. 13): ಕಾಂಗ್ರೆಸ್'ನ ಗೀತಾ ಮಹದೇವಪ್ರಸಾದ್ ಅವರು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ದೈವಾಧೀನರಾದ ಮಾಜಿ ಸಚಿವ ಮಹದೇವಪ್ರಸಾದ್ ಅವರ ಪತ್ನಿ ಗೀತಾ ಅವರು 12,077 ಮತಗಳ ಅಂತರದಿಂದ ಬಿಜೆಪಿಯ ಅಭ್ಯರ್ಥಿ ನಿರಂಜನ್ ಕುಮಾರ್ ಅವರನ್ನು ಸೋಲಿಸಿದ್ದಾರೆ. 16 ಸುತ್ತುಗಳ ಮತ ಎಣಿಕೆಯಲ್ಲಿ ಗೀತಾ ಮಹದೇವಪ್ರಸಾದ್ 90 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದರು.
ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೀತಾ ಮಹದೇವ್'ಪ್ರಸಾದ್, ಇದು ತಮ್ಮ ಪತಿಯ ಅಭಿವೃದ್ಧಿ ಕಾರ್ಯಗಳಿಗೆ ಸಿಕ್ಕ ಗೆಲುವಾಗಿದೆ ಎಂದಿದ್ದಾರೆ. ಪತಿ ನಿಧನದ ಅನುಕಂಪದ ಅಲೆಯಿಂದ ತಾನು ಗೆದ್ದಿಲ್ಲ. ಬದಲಾಗಿ, ಪತಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿರುವ ಮನ್ನಣೆ ಇದಾಗಿದೆ. ತಾನು ಆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವುದಾಗಿ ಗೀತಾ ಮಹದೇವ್ ಪ್ರಸಾದ್ ಹೇಳಿದ್ದಾರೆ.
ಗುಂಡ್ಲುಪೇಟೆಯ ಇತಿಹಾಸದಲ್ಲಿ ಮೊತ್ತಮೊದಲ ಬಾರಿಗೆ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಈ ಫಲಿತಾಂಶವು ತಣ್ಣೀರೆರಚಿದಂತಾಗಿದೆ.
ಕ್ಷೇತ್ರದ ಮತ ವಿವರ:
ಗೀತಾ ಮಹದೇವಪ್ರಸಾದ್: 90,258 ಮತಗಳು
ನಿರಂಜನ್ ಕುಮಾರ್: 79,381
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.