ಶಿವಣ್ಣ ಪತ್ನಿ ಮತ್ತೆ ಲೋಕಸಭೆಗೆ ಸ್ಪರ್ಧೆ ?

Published : Aug 05, 2018, 11:43 AM IST
ಶಿವಣ್ಣ ಪತ್ನಿ ಮತ್ತೆ ಲೋಕಸಭೆಗೆ ಸ್ಪರ್ಧೆ ?

ಸಾರಾಂಶ

ಗೀತಾ ಶಿವರಾಜ್‌ಕುಮಾರ್ ಅವರು ಶಿವಮೊಗ್ಗದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ ಎನ್ನುವ ಬಗ್ಗೆ  ಪ್ರತಿಕ್ರಿಯಿಸಿದ ಶಿವರಾಜ್‌ಕುಮಾರ್,  ಗೀತಾ ಅವರು ಲೋಕಸಭಾ ಚುನಾವಣೆಗೆ  ಸ್ಪರ್ಧಿಸಬೇಕು, ಗೆಲ್ಲಬೇಕು ಎಂಬುದು ದೇವರ ಇಚ್ಛೆಯಾಗಿದ್ದರೆ ಅದನ್ನು ಯಾರು ತಡೆಯಲು ಆಗುವುದಿಲ್ಲ ಎಂದಿದ್ದಾರೆ. 

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಿ ಗೆಲ್ಲಬೇಕು ಎಂದು ದೇವರ ಇಚ್ಛೆ ಇದ್ದರೆ ಅದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಅವರು ಶನಿವಾರ ತಮ್ಮ ಪತ್ನಿ ಗೀತಾ ಅವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈಸೂರಿನಲ್ಲಿ ತಮ್ಮ ತಾಯಿ ಪಾರ್ವತಮ್ಮ ರಾಜ್‌ಕುಮಾರ್ ಅವರು ನಡೆಸುತ್ತಿದ್ದ ಶಾಂತಿಧಾಮದ ಅಭಿವೃದ್ಧಿ ಹಾಗೂ ಅಲ್ಲಿ ಶಾಲೆಯೊಂದನ್ನು ತೆರೆಯುವ ಬಗ್ಗೆ ಚರ್ಚಿಸಿದರು.

ಬಳಿಕ, ಗೀತಾ ಶಿವರಾಜ್‌ಕುಮಾರ್ ಅವರು ಶಿವಮೊಗ್ಗದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವರಾಜ್‌ಕುಮಾರ್,  ಗೀತಾ ಅವರು ಲೋಕಸಭಾ ಚುನಾವಣೆಗೆ  ಸ್ಪರ್ಧಿಸಬೇಕು, ಗೆಲ್ಲಬೇಕು ಎಂಬುದು ದೇವರ ಇಚ್ಛೆಯಾಗಿದ್ದರೆ ಅದನ್ನು ಯಾರು ತಡೆಯಲು ಆಗುವುದಿಲ್ಲ ಎಂದರು.

ಆದರೆ, ಜತೆಯಲ್ಲಿದ್ದ ಗೀತಾ ಶಿವರಾಜ್ ಕುಮಾರ್ ಮಾತನಾಡಿ, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಹೇಳಿದರು. ಅಲ್ಲದೆ, ಸಹೋದರ ಮಧು ಬಂಗಾರಪ್ಪ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಸಿಗುವ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದ ಅವರು, ಈ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯಾವ ನಿರ್ಧಾರ ಕೈಗೊಂಡರೂ ಸ್ವಾಗತಿಸುವುದಾಗಿ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು? ಈ ವಲಸೆಗೆ ಏನು ಕಾರಣ?
ಚೈತ್ರಾ ಕುಂದಾಪುರಗೆ ಮತ್ತೊಮ್ಮೆ ಕಾನೂನು ಸಂಕಷ್ಟ; ಅಪ್ಪನ ವಿಚಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?