ಬೆಂಗಳೂರು(ಸೆ.26):ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ಸಂಬಂಧ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ. ಜಾರ್ಜ್ ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ಬೆಳಗ್ಗೆ 10:15ಕ್ಕೆ ಸರಿಯಾಗಿ ರಾಜಭವನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ, ಜಾರ್ಜ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
3 ತಿಂಗಳ ಹಿಂದೆ ಸಿಎಂ ಬಳಿ ಜಾರ್ಜ್ ಬಿಟ್ಟು ಹೋದ ಬೆಂಗಳೂರು ಅಭಿವೃದ್ಧಿ ಖಾತೆ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನವೇ ಜಾರ್ಜ್ ಅವರಿಗೆ ದಕ್ಕಿದೆ.