
ಬೆಂಗಳೂರು : ಈ ಹಿಂದೆ ವಿವಿಧ ಕಾರಣಗಳಿಂದ ಪಕ್ಷ ಬಿಟ್ಟುಹೋಗಿರುವ ನಾಯಕರನ್ನು ಮನವೊಲಿಸಿ ಮತ್ತೆ ಪಕ್ಷಕ್ಕೆ ವಾಪಸ್ ಕರುವ ಕೆಲಸ ಮಾಡುವಂತೆ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ನಾಯಕರು ಜಿಲ್ಲಾ ಮುಖಂಡರುಗಳಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಕಾಂಗ್ರೆಸ್ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಎಲ್ಲೆಡೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚಿಸಬೇಕಾಗಿದೆ. ಹಾಗಾಗಿ ಪಕ್ಷಕ್ಕೆ ಲಾಭವಾಗುವ ಎಲ್ಲ ನಾಯಕರನ್ನೂ ವಾಪಸ್ ಕರೆತನ್ನಿ. ಪ್ರಮುಖವಾಗಿ ತರೀಕೆರೆ ಕ್ಷೇತ್ರದ ಮಾಜಿ ಶಾಸಕ ಶ್ರೀನಿವಾಸ್, ಜಯಪ್ರಕಾಶ್ ಹೆಗ್ಡೆ, ಶಿವಶಂಕರ್ ಸೇರಿದಂತೆ ಪ್ರಮುಖರನ್ನು ಪಕ್ಷಕ್ಕೆ ಕರೆತರಲು ಪ್ರಯತ್ನ ನಡೆಸುವಂತೆ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದ್ದಾರೆ.
ಚಾಟಿ ಬೀಸಿದ ವೇಣು: ವಿಧಾನಸಭಾ ಚುನಾವಣೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಸೋಲನುಭವಿಸಿದ ವಿಷಯ ಪ್ರಸ್ತಾಪಿಸಿದ ವೇಣುಗೋಪಾಲ್, ಸ್ಥಳೀಯ ನಾಯಕರಿಗೆ ಬಿಸಿ ಮುಟ್ಟಿಸಿದರಲ್ಲದೆ, ‘ಎಲ್ಲರೂ ಮನೆಯಿಂದ ಹೊರಬಂದು ಪಕ್ಷ ಸಂಘಟಿಸುವ ಕೆಲಸ ಮಾಡಿ. ಹಿಂದೆ ಕರಾವಳಿಯಲ್ಲಿ ಕಾಂಗ್ರೆಸ್ ಬಲವಾಗಿತ್ತು.
ಈಗ ಬಲ ಕಳೆದುಕೊಂಡಿದೆ. ‘ವಿಸ್ತಾರಕ್ ’ರಿಂದ ಬಿಜೆಪಿಯವರಿಗೆ ಚುನಾವಣೆಯಲ್ಲಿ ಗೆಲ್ಲಲು ಅನುಕೂಲ ಆಯಿತು. ಅವರಂತೆ ನೀವೂ 30 ಕಾರ್ಯಕರ್ತರಿಗೆ ಒಬ್ಬ ಮುಖಂಡರನ್ನು ನೇಮಕ ಮಾಡಿಕೊಂಡು ತಳ ಮಟ್ಟದಿಂದ
ಪಕ್ಷವನ್ನು ಬಲಪಡಿಸಿ ಎಂದು ವೇಣುಗೋಪಾಲ್ ಸೂಚನೆ ನೀಡಿದರು’ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.