
ಕಾರವಾರ,[ಮೇ.12]: ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ಮೊದಲೇ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಭವಿಷ್ಯ ನುಡಿದಿದ್ದಾರೆ.
ಕಾರವಾರದಲ್ಲಿ ಇಂದು [ಭಾನುವಾರ] ಬಿಜೆಪಿ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುಗಿದಿದೆ ಎಂದು ಆರಾಮಾಗಿ ಇರಬೇಡಿ. ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಬರಬಹುದಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನವೇ ವಿಧಾನಸಭೆ ಚುನಾವಣೆ ಬರಬಹುದು ಎಂದು ಹೇಳಿ ಅಚ್ಚರಿ ಮೂಡಿಸಿದರು.
ಜೂನ್, ಜುಲೈ ಇಲ್ಲ ಆಗಸ್ಟ್ ವೇಳೆಗೆ ಸಮ್ಮಿಶ್ರ ಸರ್ಕಾರ ಪತನವಾಗಬಹುದು. ಸರಕಾರ ಪತನಗೊಂಡು ಚುನಾವಣೆ ಬರುವ ಸಾಧ್ಯತೆ ಇದೆ. ಪಕ್ಷದ ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದು ಹೇಳಿದರು.
ಈಗಿರುವ ಶಾಸಕರು ಮತ್ತೆ ಶಾಸಕರಾಗುತ್ತಾರೆ. ಕಾರ್ಯಕರ್ತರು ರೆಸ್ಟ್ ತೆಗೆದುಕೊಳ್ಳಲು ನಾವಂತೂ ಬಿಡಲ್ಲ. ಮುಂದಿನ ಚುನಾವಣೆಗೆ ಈಗಲೇ ಸಿದ್ಧರಾಗಿ ಎಂದು ಅನಂತ್ ಕುಮಾರ್ ಹೆಗಡೆ ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.