
ಆಹಾರದಲ್ಲಿ ಶುಂಠಿ ಮತ್ತು ಮೆಣಸನ್ನು ನೀವು ಉಪಯೋಗಿಸುವುದರಿಂದ ಕ್ಯಾನ್ಸರ್ ರೋಗವನ್ನು ತಡೆಯಬಹುದು. ಇತ್ತೀಚಿನ ಸಂಶೋಧನೆಯೊಂದರಿಂದ ಈ ವರಧಿ ಹೊರಬಿದ್ದಿದೆ. ಆಹಾರದಲ್ಲಿ ಉಪಯೋಗಿಸುವ ಶುಂಠಿ ಮತ್ತು ಮೆಣಸು ಕ್ಯಾನ್ಸರ್ ಗಡ್ಡೆಯ ಬೆಳವಣಿಗೆಯನ್ನು ತಡೆಯುತ್ತವೆ. ಹಾಗೂ ಈ ಎರಡೂ ಮಸಾಲೆ ಪದಾರ್ಥಗಳೂ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.
ಅಮೇರಿಕನ್ ಕೆಮಿಕಲ್ ಸೊಸೈಟಿ ಯ ಸಂಶೋಧಕರು ಇಲಿಗಳ ಮೇಲೆ ಸಂಶೋಧನೆ ನೆಡೆಸಿ ಶುಂಠಿ ಮತ್ತು ಮೆಣಸು ಸೇವಿಸಿದ ಇಲಿಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ರೋಗಾಣುಗಳ ವಿರುದ್ದ ಹೋರಾಡುವ ರೋಗನಿರೋಧಕ ಶಕ್ತಿ ಹೆಚ್ಚಿರುವುದು ಬೆಳಕಿಗೆ ಬಂದಿದೆ. ಈ ಮಸಾಲೆ ಪದಾರ್ಥಗಳನ್ನು ಆಹಾರದಲ್ಲಿ ದಿನನಿತ್ಯ ಉಪಯೋಗಿಸಿದವರಲ್ಲಿ ಕ್ಯಾನ್ಸರ್ ಗಡ್ಡೆಯ ಬೆಳವಣಿಗೆಯೂ ಕಡಿಮೆಯಾಗಿರುವುದು ಕಂಡುಬಂದಿದೆ. ಶುಂಠಿ ಮತ್ತು ಮೆಣಸನ್ನು ಸೇವಿಸುವುದರಿಂದ ಮನುಷ್ಯರಲ್ಲಿ ರೋದನಿರೋಧಕ ಶಕ್ತಿಯೂ ಹೆಚ್ಚುವುದು ಸಂಶೋಧನೆಯಿಂದ ಸಾಬೀತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.