ಪಾಪ್ಯುಲೇಶನ್ ಕಂಟ್ರೋಲ್ ಆಗ್ಬೇಕು: ಗಿರಿರಾಜ್ ಇಶಾರೆಗೆ ಏನ್ ಅನ್ಬೇಕು?

Published : Jul 11, 2019, 06:22 PM IST
ಪಾಪ್ಯುಲೇಶನ್ ಕಂಟ್ರೋಲ್ ಆಗ್ಬೇಕು: ಗಿರಿರಾಜ್ ಇಶಾರೆಗೆ ಏನ್ ಅನ್ಬೇಕು?

ಸಾರಾಂಶ

ಜನಸಂಖ್ಯೆ ನಿಯಂತ್ರಣಕ್ಕೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸಲಹೆ| ಸಲಹೆ ಮೂಲಕ ಮತ್ತೊಂದು ವಿವಾದಕ್ಕೆ ಕಾರಣರಾದ ಬಿಜೆಪಿ ನಾಯಕ| ‘ದೇಶದ ಜನಸಂಖ್ಯೆ  ಆಘಾತಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ’| ‘ಜನಸಂಖ್ಯೆ ಹೆಚ್ಚಳಕ್ಕೆ ಧಾರ್ಮಿಕ ನಂಬಿಕೆಗಳು ಪ್ರಮುಖ ಕಾರಣ’|ಜನಸಂಖ್ಯೆ ನಿಯಂತ್ರಣಕ್ಕೆ ಮಸೂದೆ ಜಾರಿಗೆ ತರಲು ಮನವಿ| ಎಲ್ಲ ರಾಜಕೀಯ ಪಕ್ಷಗಳೂ ಮಸೂದೆ ಜಾರಿಗೆ ತರಲು ಸಹಕರಿಸಬೇಕು ಎಂದ ಗಿರಿರಾಜ್|

ನವದೆಹಲಿ(ಜು.11): ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ದೇಶದ ಜನಸಂಖ್ಯೆ  ಆಘಾತಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಇದಕ್ಕೆ ಧಾರ್ಮಿಕ ನಂಬಿಕೆಗಳು ಪ್ರಮುಖ ಕಾರಣ ಎಂದು ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜನಸಂಖ್ಯೆ ನಿಯಂತ್ರಣಕ್ಕೆ ಮಸೂದೆ ಜಾರಿಗೆ ತರಲು ದೇಶದ ಎಲ್ಲ ರಾಜಕೀಯ ಪಕ್ಷಗಳು ಮನಸ್ಸು ಮಾಡಬೇಕಿದೆ ಎಂದೂ ಗಿರಿರಾಜ್ ಸಿಂಗ್ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಗಿರಿರಾಜ್, ಜನಸಂಖ್ಯೆ ನಿಯಂತ್ರಣ ಇಂದಿನ ತುರ್ತು ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಧಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು ಒಟ್ಟಾಗಿ ಕಾನೂನು ರೂಪಿಸಲು ಸಹಕರಿಸಬೇಕಿದೆ ಎಂದು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?