ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ; ಗಣ್ಯರ ಸಂತಾಪ

By Web DeskFirst Published Jun 10, 2019, 10:04 AM IST
Highlights

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ | ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು | 

ಜ್ಞಾನಪೀಠ ಪುರಸ್ಕೃತ, ಹಿರಿಯ ಸಾಹಿತಿ, ಬುದ್ದಿಜೀವಿ ಗಿರೀಶ್ ಕಾರ್ನಾಡ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಕಾರ್ನಾಡರ ಕೊಡುಗೆ ಅಪಾರ. ಇವರ ಸಾವಿಗೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. 

 

Girish Karnad will be remembered for his versatile acting across all mediums. He also spoke passionately on causes dear to him. His works will continue being popular in the years to come. Saddened by his demise. May his soul rest in peace.

— Narendra Modi (@narendramodi)

ಜ್ಞಾನಪೀಠ ಪುರಸ್ಕೃತ,ಹಿರಿಯ ರಂಗಭೂಮಿ ಕಲಾವಿದ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ನಿಧನ ರಾದ ಸುದ್ದಿ ತಿಳಿಯಿತು . ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಅಪಾರ .ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ . pic.twitter.com/C9an457xv2

— Sadananda Gowda (@DVSBJP)

ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ‌ ನಾನು ಭಾಗಿಯಾಗಿದ್ದೇನೆ. pic.twitter.com/VWTWZO12xa

— Siddaramaiah (@siddaramaiah)

ಮತ್ತು ಕೇಂದ್ರದ ಸಂಗೀತ-ನಾಟಕ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಇವರ ನಿಧನದಿಂದ ‌ಕನ್ನಡನಾಡು ಒಬ್ಬ ಮೇರು ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಕಾರ್ನಾಡ್ ಕುಟುಂಬಸ್ಥರಿಗೆ ಇವರ ಅಗಲಿಕೆಯ ಶೋಕವನ್ನು ಭರಿಸುವ ಶಕ್ತಿಯನ್ನು ತಾಯಿ ‌ಚಾಮುಂಡೇಶ್ವರಿ ನೀಡಲಿ. (2/2) pic.twitter.com/HZS8LttzwH

— GT Devegowda (@GTDevegowda)

ಕನ್ನಡಕ್ಕೆ 7 ನೇ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರು ವಿಧಿವಶರಾದ ಸುದ್ದಿ‌ ಕೇಳಿ ತೀವ್ರ ದುಃಖವಾಗಿದೆ. ಅವರ ಅಭಿಮಾನಿ ವರ್ಗ ಹಾಗೂ ಬಂಧುಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

— H D Devegowda (@H_D_Devegowda)
 
click me!