ಕುಡುಗೋಲಿನ ರೂಪದಲ್ಲಿ ಬಂದ ಯಮರಾಯ!

Published : Apr 12, 2019, 01:02 PM ISTUpdated : Apr 12, 2019, 01:16 PM IST
ಕುಡುಗೋಲಿನ ರೂಪದಲ್ಲಿ ಬಂದ ಯಮರಾಯ!

ಸಾರಾಂಶ

ಕುಡುಗೋಲಿನ ರೂಪದಲ್ಲಿ ಬಂದ ಯಮರಾಯ| ನೋಡ ನೋಡುತ್ತಿದ್ದಂತೆಯೇ ವಿದ್ಯಾರ್ಥಿನಿ ಸಾವು| ಸಾರ್ವಜನಿಕರಿಗೆ ದಿಗ್ರ್ಭಮೆ

ಕಲಬುರಗಿ[ಏ.12]: ಕಲಬುರಗಿಯಲ್ಲೊಂದು ವಿಚಿತ್ರ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ಕುರಿಗಳಿಗೆ ಮರದ ತಪ್ಪಲು ಕೊಯ್ಯಲು ಬಳಸುವ ಕುಡಗೋಲು ತಗುಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಈ ಘಟನೆ ಎಲ್ಲರನ್ನೂ ನಿಬ್ಬೆರಗಾಗಿಸಿದೆ.

ಕುರಿಗಾಹಿಯೊಬ್ಬ ತನ್ನ ಉದ್ದನೆಯ ಹಿಡಿಕೆಯುಳ್ಳ ಕುಡುಗೋಲು ಸೈಕಲ್ ಗೆ ಕಟ್ಟಿಕೊಂಡು ಹೊರಟಿದ್ದ. ಇತ್ತ ವಿದ್ಯಾರ್ಥಿನಿ ಆತನ ಸೈಕಲ್ ಹಿಂದೆ ಬೈಕ್ ನಲ್ಲಿ ಬರುತ್ತಿದ್ದಳು. ತನ್ನ ದಾರಿಯಲ್ಲಿ ಸಾಗುತ್ತಿದ್ದ ಕುರಿಗಾಯಿ ತಿರುವೊಂದರಲ್ಲಿ ಸೈಕಲ್ ನ್ನು ಎಡಕ್ಕೆ ತಿರುಗಿಸಿದಾಗ ಹಿಂಬದಿಯಲ್ಲಿ ಸಿಕ್ಕಿಸಿದ್ದ  ಕುಡುಗೋಲು ಬಲಕ್ಕೆ ಹೊರಳಿದೆ. ಇದು ಹಿಂಬದಿಯಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯ ಕತ್ತನ್ನೇ ನೇರವಾಗಿ ಕೊಯ್ದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮೃತ ವಿದ್ಯಾರ್ಥಿನಿಯನ್ನು ಮೇಘನಾ (20) ಎಂದು ಗುರುತಿಸಲಾಗಿದೆ. ಮೇಘನಾ ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ. ಸದ್ಯ ಈ ಅಪಘಾತದಿಂದ ಸಾರ್ವಜನಿಕರು ನಿಬ್ಬೆರಗಾಗಿದ್ದಾರೆ. ಕಲಬುರಗಿಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?