
ಬೀದರ್ : ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದವನು ಆಕೆ ಮದುವೆ ಆಗಲ್ಲ ಅಂದಿದ್ದಕ್ಕೆ ಕತ್ತುಕುಯ್ದ ಕೊಲೆ ಮಾಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಇಂತದ್ದೊಂದು ಘಟನೆ ನಡೆದಿದ್ದು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಮ್ ಗ್ರಾಮದಲ್ಲಿ. ಪಾಪಿ ಪ್ರೇಮಿಯ ಅಮಾನವೀಯ ಕೃತ್ಯದಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ.
ಕೋಸಮ್ ಗ್ರಾಮದ ಶಹಾಬುದ್ದಿನ್, ಪಕ್ಕದ ಮನೆಯ ವಿದ್ಯಾರ್ಥಿನಿಯನ್ನು ಕಳೆದ ಕೆಲ ತಿಂಗಳಿಂದ ಪ್ರೀತಿಸುತ್ತಾ ಇದ್ದ. ಆದರೆ ಇದಕ್ಕೆ ಆಕೆ ಒಪ್ಪಿರಲಿಲ್ಲ. ಇಷ್ಟಾದರೂ ಕೂಡ ಶಹಾಬುದ್ದಿನ್, ಮದುವೆ ಆಗುವಂತೆ ದುಂಬಾಲು ಬಿದ್ದಿದ್ದ.
ಇದಕ್ಕೂ ಕ್ಯಾರೇ ಎಂದಿರಲಿಲ್ಲ. ಇದರಿಂದ ಕೋಪಗೊಂಡ ಶಹಾಬುದ್ದಿನ್, ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಮತ್ತು ಶವವನ್ನು ಖಾನಾಪೂರ ಅರಣ್ಯ ಪ್ರದೇಶದಲ್ಲಿ ಬಿಸಾಕಿ ಆಕೆಯ ಮನೆಯವರ ಬಳಿಗೆ ಬಂದು, ನಾನು ನಿನ್ನ ಮಗಳನ್ನು ಕೊಂದಿದ್ದೇನೆ ಅಂತ ತಪ್ಪೊಪ್ಪಿಕೊಂಡಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.