ಪೋಷಕರ ನಿಂದನೆಗೆ ಹೆದರಿ ಬಾಲಕಿಯಿಂದ ಅತ್ಯಾಚಾರದ ಕಟ್ಟುಕತೆ

Published : Oct 07, 2016, 04:38 PM ISTUpdated : Apr 11, 2018, 01:07 PM IST
ಪೋಷಕರ ನಿಂದನೆಗೆ ಹೆದರಿ ಬಾಲಕಿಯಿಂದ ಅತ್ಯಾಚಾರದ ಕಟ್ಟುಕತೆ

ಸಾರಾಂಶ

ಬೆಂಗಳೂರು: ಪೋಷಕರು ಬೇರೊಬ್ಬರೊಂದಿಗೆ ವಿವಾಹ ಮಾಡುತ್ತಾರೆಂದು ಆತಂಕ​ಗೊಂಡು ಪ್ರಿಯಕರನೊಂದಿಗೆ ಪರಾರಿ​ಯಾ​ಗಿದ್ದ ಅಪ್ರಾಪ್ತೆ ಬಳಿಕ ಸಮಸ್ಯೆ​ಯಿಂದ ಪಾರಾಗಲು ತನ್ನನ್ನು ಅಪ​​ಹ​ರಿಸಿ​ದ್ದಾಗ್ಯೂ, ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿಯೂ ಸುಳ್ಳು ಹೇಳಿ ಕೊನೆಗೆ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾಳೆ.

ಪೋಷಕರ ದೂರಿ​ನ ಹಿನ್ನೆಲೆಯಲ್ಲಿ ಪೊಲೀಸರು ಗುಡ್ಡದ​ಹಳ್ಳಿಯ ಫರ್ಖಾನ್‌ ಅಹ್ಮದ್‌ (18) ಹಾಗೂ ಆತನ ಸ್ನೇಹಿತ ಸಂದೀಪ್‌ (18) ಎಂಬಾತನ ಅಪಹರಣದ ಆರೋಪ­ ದಡಿ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.

ಫರ್ಖಾನ್‌ ಹಾಗೂ ಬಾಲಕಿ ಚಾಮ​ರಾಜಪೇಟೆಯ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದು, ಪರಸ್ಪರ ಪ್ರೀತಿ­ಸು­ತ್ತಿದ್ದರು. ಫರ್ಖಾನ್‌ ಅನ್ಯ ಧರ್ಮೀ­ಯನೆಂಬ ಕಾರಣಕ್ಕೆ ಬಾಲಕಿ ಮನೆ­ಯವರು ಮದುವೆಗೆ ನಿರಾಕರಿಸಿದ್ದರು. ಇದ​ರಿಂದ ಗೊಂದಲಕ್ಕೀಡಾದ ಬಾಲಕಿ, ಮನೆಯಿಂದ ಪರಾರಿಯಾಗಿದ್ದಳು. ಈ ಸಂಬಂಧ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಾಲಕಿ ತಾಯಿಗೆ ಆರೋಗ್ಯ ಹದಗೆಟ್ಟಿದೆ ಎಂದು ಪೊಲೀಸರು ಕಳುಹಿಸಿದ ಸಂದೇಶ ಓದಿದ ನಂತರ ಮನೆಗೆ ಬಂದ ಬಾಲಕಿ, ಪೋಷಕರಿಂದ ತಪ್ಪಿಸಿಕೊಳ್ಳಲು ಸುಳ್ಳಿನ ಕತೆ ಕಟ್ಟಿದ್ದಾಳೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ಕನ್ನಡಪ್ರಭ ವಾರ್ತೆ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!