
ನವದೆಹಲಿ(ಡಿ.27): ಐಎಎಸ್ ಅಧಿಕಾರಿಗಳು ತಮ್ಮ ಆಸ್ತಿಯ ವಿವರಗಳನ್ನು ಮುಂದಿನ ತಿಂಗಳ ಒಳಗಾಗಿ ಸಲ್ಲಿಸಬೇಕು. ಒಂದು ವೇಳೆ ಆಸ್ತಿ ವಿವರ ಸಲ್ಲಿಸಲು ವಿಫಲರಾದರೆ ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಐಎಎಸ್ ಅಧಿಕಾರಿಗಳು 2018ರ ಜ.31ರ ಒಳಗಾಗಿ ಸ್ಥಿರಾಸ್ತಿ ವಿವರಗಳನ್ನು ಸಲ್ಲಿಸಬೇಕು. ಒಂದು ವೇಳೆ ಸಮಯಕ್ಕೆ ಸರಿಯಾಗಿ ಐಪಿಆರ್ (ಸ್ಥಿರಾಸ್ತಿ ವಿವರ)ಗಳನ್ನು ಸಲ್ಲಿಸಲು ಸಾಧವಾಗದೇ ಇದ್ದರೆ ಅಂಥವರ ಬಡ್ತಿ ಮತ್ತು ವಿದೇಶ ಪ್ರವಾಸಕ್ಕೆ ಅಗತ್ಯವಾಗಿರುವ ವಿಚಕ್ಷಣಾ ಪರವಾನಗಿಯನ್ನು ತಡೆಹಿಡಿಯಲಾಗುವುದು ಎಂದು ಹೆಚ್ಚುಚರಿ ಕಾರ್ಯದರ್ಶಿ ಪಿ.ಕೆ. ತ್ರಿಪಾಠಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.