
ಹೊನ್ನಾವರ : ಕೋಮು ಗಲಭೆಯಲ್ಲಿ ಮೃತಪಟ್ಟಪರೇಶ ಮೇಸ್ತ ಮನೆಗೆ ಬುಧವಾರ ಭೇಟಿ ನೀಡಿ ಸಾಂತ್ವನ ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪರೇಶ ಮೇಸ್ತ ಸಾವಿನ ತನಿಖೆಯನ್ನು ಸಿಬಿಐ ನಡೆಸಲಿದೆ ಎಂದು ಭರವಸೆ ತುಂಬಿದರು.
ಮೇಸ್ತ ಅವರ ಮನೆಯಲ್ಲಿ 20 ನಿಮಿಷಗಳ ಕಾಲ ಕಳೆದ ಶಾ,ನಿಮ್ಮೊಂದಿಗೆ ನಾವಿದ್ದೇವೆ ಎಂದು ಆತ್ಮವಿಶ್ವಾಸ ಮೂಡಿಸಿದರು.
‘ತನಿಖೆಯನ್ನು ಸಿಬಿಐ ನಡೆಸಲಿದೆ. ಸಿಬಿಐನ ಎಸ್ಪಿ ಮಟ್ಟದ ಅಧಿಕಾರಿಯಿಂದ ಕೇಂದ್ರ ಸರ್ಕಾರ ತನಿಖೆ ನಡೆಸಲಿದೆ. ನಿಮ್ಮ ಕುಟುಂಬಕ್ಕೆ ಉದ್ಯೋಗ ನೀಡುವ ಬಗ್ಗೆ ಪರಿಶೀಲನೆ ನಡೆಸಲಿದ್ದೇವೆ’ ಎಂದು ತಂದೆ ಕಮಲಾಕರ ಮೇಸ್ತ ಅವರಿಗೆ ಶಾ ಭರವಸೆ ನೀಡಿದರು. ಶಾ ಅವರನ್ನು ನೋಡಿ ಮೇಸ್ತ ತಂದೆ ಗದ್ಗದಿತರಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.