‘ಮಠಾಧೀಶರ ಕಾಲಿಗೆ ಜನ ಬೀಳೋದು ನಿಲ್ಸೋವರೆಗೆ ದೇಶ ಉದ್ಧಾರವಾಗಲ್ಲ'

Published : Nov 14, 2017, 01:09 PM ISTUpdated : Apr 11, 2018, 12:59 PM IST
‘ಮಠಾಧೀಶರ ಕಾಲಿಗೆ ಜನ ಬೀಳೋದು ನಿಲ್ಸೋವರೆಗೆ ದೇಶ ಉದ್ಧಾರವಾಗಲ್ಲ'

ಸಾರಾಂಶ

ಜನರು ಹಾಗೂ ಜನಪ್ರತಿನಿಧಿಗಳು ಮಠಾಧೀಶರ ಕಾಲಿಗೆ ಬೀಳುವುದನ್ನು ನಿಲ್ಲಿಸುವವರೆಗೆ ದೇಶ ಉದ್ಧಾರವಾಗುವುದಿಲ್ಲ, ದೇಶದಲ್ಲಿರುವ ಶೇ. 95ರಷ್ಟು ಮಠಾಧೀಶರು ನಂಬಿಕೆ ಉಳಿಸಿಕೊಳ್ಳದೇ ಮಠಗಳ ಮೂಲಕ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಚಿಂತಕ ಜಿ.ಕೆ.ಗೋವಿಂದರಾವ್ ಟೀಕಿಸಿದ್ದಾರೆ.

ಬೆಂಗಳೂರು: ಜನರು ಹಾಗೂ ಜನಪ್ರತಿನಿಧಿಗಳು ಮಠಾಧೀಶರ ಕಾಲಿಗೆ ಬೀಳುವುದನ್ನು ನಿಲ್ಲಿಸುವವರೆಗೆ ದೇಶ ಉದ್ಧಾರವಾಗುವುದಿಲ್ಲ, ದೇಶದಲ್ಲಿರುವ ಶೇ. 95ರಷ್ಟು ಮಠಾಧೀಶರು ನಂಬಿಕೆ ಉಳಿಸಿಕೊಳ್ಳದೇ ಮಠಗಳ ಮೂಲಕ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಚಿಂತಕ ಜಿ.ಕೆ.ಗೋವಿಂದರಾವ್ ಟೀಕಿಸಿದ್ದಾರೆ.

ನಯನ ಸಭಾಂಗಣದಲ್ಲಿ ಸೋಮವಾರ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ‘ಡಾ. ಬಿ.ಆರ್. ಅಂಬೇಡ್ಕರ್ ಧಮ್ಮ ದೀಕ್ಷ ಪರಿವರ್ತನಾ ದಿನ’ ಆಚರಣೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿರುವ ಶೇ.95ರಷ್ಟು ಕಾವಿಧಾರಿಗಳು ತಮ್ಮ ಅಧಿಕಾರಕ್ಕಾಗಿ ಜನರನ್ನು ಜಾತಿ, ಧರ್ಮಗಳ ಸಂಕೋಲೆಯಲ್ಲಿ ಕಟ್ಟಿ ಹಾಕುತ್ತಿದ್ದಾರೆ. ಮನುಷ್ಯ ಹುಟ್ಟಿದ ಜಾತಿಯಲ್ಲೇ ಇರಬೇಕೆಂದು ಹೇಳಲು ಮಠಾಧೀಶರು ಯಾರು? ಎಂದು ಪ್ರಶ್ನಿಸಿದರು.

ಕಾವಿ ಧರಿಸಿದರೆ ವಿವೇಕ, ಅನುಭವ ಬರುವುದಿಲ್ಲ. ಅಧಿಕಾರದ ಪೀಠ ಬರುತ್ತದೆ. ಅಧಿಕಾರ ಬಂದ ಬಳಿಕ ದೇವರ ಏಜೆಂಟ್‌ಗಳಾಗುತ್ತಾರೆ ಎಂದ ಅವರು, ಸಂವಿಧಾನ, ಪ್ರಜಾಪ್ರಭುತ್ವ, ಸಮಾನತೆ ವಿರೋಧಿಗಳಾಗಿರುವ ಎಲ್ಲಾ ಮಠಗಳ ಒಳಮರ್ಮ ಅಧಿಕಾರ ಉಳಿಸಿಕೊಳ್ಳುವುದಾಗಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಕೊಳ್ಳೆಗಾಲದ ಜೀತೋವನದ ಮನೋರಖ್ಸಿತ ಭಂತೇ, ಲೇಖಕ ಸಿ.ಎಚ್. ರಾಜಶೇಖರ, ದಸಂಸ ವಿಭಾಗೀಯ ಸಂಚಾಲಕ ಜೀವನಹಳ್ಳಿ ಆರ್. ವೆಂಕಟೇಶ್ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರಸಗುಲ್ಲಾ ಖಾಲಿ ಆಯ್ತು ಎಂದು ಮುರಿದು ಬಿತ್ತು ಮದ್ವೆ: ಮದುವೆ ಮನೆಯಾಯ್ತು ರಣಾಂಗಣ