ಜಾಗತಿಕ ತಾಪಮಾನ ಏರಿಕೆ ತರುತ್ತಿದೆ ಭಾರಿ ಅನಾಹುತ : ಏಚ್ಚರ!

Published : Sep 07, 2018, 01:49 PM ISTUpdated : Sep 09, 2018, 09:16 PM IST
ಜಾಗತಿಕ ತಾಪಮಾನ ಏರಿಕೆ ತರುತ್ತಿದೆ ಭಾರಿ ಅನಾಹುತ  : ಏಚ್ಚರ!

ಸಾರಾಂಶ

ಜಾಗತಿಕ ತಾಪಮಾನ ಏರಿಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಇದರಿಂದ ಭಾರೀ ಪ್ರಮಾಣದಲ್ಲಿ ಸಮಸ್ಯೆಗಳು ಎದುರಾಗಬಹುದು. ಸುನಾಮಿಯಂತಹ ಸಮಸ್ಯೆಗಳು ಸಂಭವಿಸಬಹುದು ಎಂದು ಸಂಶೋಧನೆಯೊಂದು ಹೇಳಿದೆ. 

ಪ್ಯಾರಿಸ್ :  ಜಾಗತಿಕ ತಾಪಮಾನ ಏರಿಕೆಯು ಪರಸರದ ಮೇಲೆ ಮಾರಕ ಪರಿಣಾಮವನ್ನು ಉಂಟು ಮಾಡುತ್ತಿದೆ.  ಅಲ್ಲದೇ ಇದರಿಂದ ಭಾರೀ ಪ್ರಮಾಣದ ಮಂಜುಗಡ್ಡೆಗಳು ಕರುಗುವಿಕೆ, ಭೂಕುಸಿತ, ಭೂ ಕಂಪನದಂತಹ ಸಮಸ್ಯೆಗಳು ಎದುರಾಗುತ್ತದೆ. 

ಜಾಗತಿಕ ತಾಪಮಾನ ಏರಿಕೆಯ ಮುಖ್ಯ ಉದಾಹರಣೆಯಾಗಿ 2015ರಲ್ಲಿ ಅಲಸ್ಕನ್ ನಲ್ಲಿ ಸಂಭವಿಸಿದ ಭಾರೀ ಪ್ರಮಾಣದ ಸುನಾಮಿಯನ್ನು ತೆಗೆದುಕೊಳ್ಳಬಹುದಾಗಿದೆ. ಸುನಾಮಿ ಸಂಭವಿಸಿ 200 ಮೀಟರ್ ಎತ್ತರದಲ್ಲಿ ಸಮುದ್ರದ ಅಲೆಗಳು ಅಪ್ಪಳಿಸಿದ್ದವು.  ಇದೊಂದು ಅತ್ಯಂತ ಭಯಾನಕ ಸುನಾಮಿಯಾಗಿತ್ತು. ಆದರೆ ಈ ವೇಳೆ ಯಾವುದೇ ರೀತಿಯ ಸಾವು ನೋವುಗಳು ಸಂಭವಿಸದ ಹಿನ್ನೆಲೆಯಲ್ಲಿ ಇದು ಅಷ್ಟು ಪ್ರಮಾಣದಲ್ಲಿ ಬೆಳಕಿಗೆ ಬರಲಿಲ್ಲ. 

ಈ ಸುನಾಮಿಯು ಮಂಜುಗಡ್ಡೆ ಕರಗುವಿಕೆ ಹಾಗೂ ಕಲ್ಲು ಬಂಡೆಗಳು ಅಲುಗಾಡಲು ಕಾರಣವಾಯಿತು. ಇದೀಗ ಜಾಗತಿಕ ತಾಪಮಾನ ಏರಿಕೆಯು ಜಗತ್ತಿನಲ್ಲಿ ಅನೇಕ ರೀತಿಯ ಅನಾಹುತ ಸಂಭವಿಸಲು ಕಾರಣವಾಗುತ್ತಿದೆ.  ಮಂಜುಗಡ್ಡೆ ಕರುಗುವುದಷ್ಟೇ ಅಲ್ಲದೇ ಭೀಕರ ಸುನಾಮಿಗೂ ಕೂಡ  ಪದೇ ಪದೇ ಸಂಭವಿಸುತ್ತಿವೆ.  

ಸಮುದ್ರ ತಟದಲ್ಲಿ ಭಾರೀ ಪ್ರಮಾಣದ ರಕ್ಕಸ ಅಲೆಗಳು ಸೃಷ್ಟಿಯಾಗಲು ಕಾರಣವಾಗುತ್ತದೆ. ಆದ್ದರಿಂದ ಹವಾಮಾನ ಬದಲಾವಣೆ ವೈಪರೀತ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ ಜಾಗತಿಕ ತಾಪಮನ ಏರಿಕಯಾಗದಂತೆ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ. 

ಅಲ್ಲದೇ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರಪಂಚದ ವಿವಿಧ ಪ್ರದೇಶಗಳಲ್ಲಿ ಸಂಭವಿಸುವ ಭೂ ಕಂಪನಕ್ಕೆ ಜಾಗತಿಕ ತಾಪಮಾನವು ಪರೋಕ್ಷ ಕಾರಣವಾಗಿದೆ ಎಂದು ಸಂಶೋಧನೆಯೊಂದು ಹೇಳಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ