
ಬೆಂಗಳೂರು(ಮಾ. 02): ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಬಿಡುವ ಸರಕಾರದ ನಿರ್ಧಾರವನ್ನು ಬಿಜೆಪಿ ಮುಖಂಡ ಗೋ.ಮಧುಸೂದನ್ ಸ್ವಾಗತಿಸಿದ್ದಾರೆ. ಗೋವಿಂದರಾಜು ಡೈರಿ ಪ್ರಕರಣದ ಭೀತಿಯಿಂದ ಸರಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಬಿಜೆಪಿ ಮುಖಂಡ ವಿಶ್ಲೇಷಿಸಿದ್ದಾರೆ. ಅಲ್ಲದೇ, ಯೋಜನೆಗೆ ಯಾರಾರಿಂದ ಹಣ ಪಡೆಯಲಾಗಿದೆಯೋ, ಅವರಿಗೆಲ್ಲಾ ಹಣವನ್ನ ಮರಳಿಸಬೇಕು. ಆ ಬಳಿಕವಷ್ಟೇ ಯೋಜನೆ ರದ್ದು ಮಾಡಬೇಕು ಎಂದೂ ಈ ವೇಳೆ ಗೋ.ಮಧುಸೂದನ್ ಆಗ್ರಹಿಸಿದ್ದಾರೆ.
ಗೋವಿಂದರಾಜು ಡೈರಿಯಲ್ಲಿ ಯೋಜನೆಯಿಂದ 65 ಕೋಟಿ ರೂ ಪಡೆದಿರುವುದು ಹಾಗೂ ಬಿಡಿಎ ಅಧಿಕಾರಿ ಎಲ್.ರಘು ಅವರನ್ನು ವರ್ಗಾವಣೆ ಮಾಡಿರುವುದು ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಸರಕಾರದ ಅವ್ಯವಹಾರ ನಡೆದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಧುಸೂದನ್ ಆರೋಪಿಸಿದ್ದಾರೆ.
ಗೋವಿಂದರಾಜು ಡೈರಿಯಲ್ಲಿ ನಮೂದಾಗಿರುವ ಎಲ್ಲಾ ಸಚಿವರೂ ರಾಜೀನಾಮೆ ನೀಡಬೇಕು ಎಂದು ಹೇಳಿದ ಮಧುಸೂದನ್, ಮುಖ್ಯಮಂತ್ರಿಗಳ ಸಲಹೆಗಾರ ಸ್ಥಾನದಿಂದ ಕೆಂಪಯನ್ನವರನ್ನು ಯಾವಾಗ ಕಿತ್ತುಹಾಕಲಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.