‘ಯಾರು ಎಲ್ಲಿಗೆ ಬೇಕಾದರೂ ಹೋಗಲಿ..!'

Published : Apr 22, 2017, 07:55 AM ISTUpdated : Apr 11, 2018, 12:49 PM IST
‘ಯಾರು ಎಲ್ಲಿಗೆ ಬೇಕಾದರೂ ಹೋಗಲಿ..!'

ಸಾರಾಂಶ

ತಮ್ಮ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಈ ತಿಂಗಳ 27ರಂದು ಪಕ್ಷದ ಮುಖಂಡರು ಸಭೆ ನಡೆಸುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಬೆಂಗಳೂರು (ಏ.22): ಪದಾಧಿಕಾರಿಗಳ ನೇಮಕ ಕುರಿತಂತೆ ಅಸಮಾಧಾನ​ಗೊಂಡಿರುವ ಮುಖಂಡರು ದೆಹಲಿಗೆ ತೆರಳಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ದೂರು ನೀಡುತ್ತಾರೆ ಎಂ​ಬುದರ ಬಗ್ಗೆ ಬಿಜೆಪಿ ರಾಜ್ಯಾ​ಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ತೀಕ್ಷ್ಣ ಪ್ರತಿಕ್ರಿಯೆ ಇದು.

ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಎಲ್ಲಿಗೆ ಬೇಕಾದರೂ ಹೋಗಲಿ. ಈ ತಿಂಗಳ 27ರಂದು ಪಕ್ಷದ ಮುಖಂಡರು ಸಭೆ ನಡೆಸುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ನಾಲ್ವರು ಮುಖಂಡರನ್ನು ಒಳಗೊಂಡ ಪಕ್ಷದ ಉನ್ನತ ಸಮಿತಿ ಇದುವರೆಗೆ ಒಂದೇ ಒಂದು ಸಭೆ ನಡೆಸದೇ ಇರುವುದು ಅಶಿಸ್ತು ಎಂಬ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲ ಎಂಬ ಪ್ರಶ್ನೆಗೆ, ನಾನು ಯಾರ ಹೇಳಿಕೆಗಳಿಗೂ ಪ್ರತಿಕ್ರಿಯಿಸಲು ಹೋಗುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!