
ಬೆಂಗಳೂರು (ಮಾ. 05): ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರ ಅನಾರೋಗ್ಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಸುದ್ದಿ ಮಾಧ್ಯಮಗಳಲ್ಲಿ ಗಾಳಿಸುದ್ದಿ ಹರಿದಾಡುತ್ತಿದೆ. ‘ಪರ್ರಿಕರ್ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಅದು ಈಗ ನಾಲ್ಕನೇ ಹಂತ ತಲುಪಿರುವುದರಿಂದ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದೂ ಹೇಳಲಾಗಿತ್ತು.
ಇಂತಹ ಸುದ್ದಿಗಳು ಮಾಧ್ಯಮ ಗಳಲ್ಲಿ ಮುಂಬೈನ ಲೀಲಾವತಿ ಆಸ್ಪತ್ರೆಯು ಪರ್ರಿಕರ್ ಆರೋಗ್ಯ ಕುರಿತ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟೀಕರಣ ನೀಡಿತು. ಆ ಹೇಳಿಕೆಯಲ್ಲಿ ‘ಪರ್ರಿಕರ್ ಅವರ ಅರೋಗ್ಯ ವಿಚಾರವಾಗಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು. ನಾವು ಪದೇ ಪದೇ ಹೇಳುತ್ತಿದ್ದೇವೆ ಅವರ ಆರೋಗ್ಯದ ಸ್ಥಿತಿ ಚೆನ್ನಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ’ ಎಂದು ಹೇಳಿ ಎಲ್ಲಾ ಕುರಿತ ವದಂತಿಗಳನ್ನು ಅಲ್ಲಗೆಳೆದಿತ್ತು. ಆದರೆ ಹೇಳಿಕೆಯಲ್ಲಿ ಪರ್ರಿಕರ್ ಯಾವ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿಲ್ಲ. ಫೆ.15 ರಂದು ಸಣ್ಣ ಪ್ರಮಾಣದ ಮೇದೋಜೀರಕ ಗ್ರಂಥಿ ಸಮಸ್ಯೆಯಿಂದ ಪರ್ರಿಕರ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಸ್ತುತ ಪರ್ರಿಕರ್ ಮುಂಬೈ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಬಳಿಕ
ಪುನಃ ಅನಾರೋಗ್ಯದಿಂದ ಗೋವಾ ಆಸ್ಪತ್ರೆಗೂ ದಾಖಲಾಗಿದ್ದರು. ಈಗ ಅವರು ಗುಣಮುಖರಾಗಿದ್ದು, ಮನೆಯಿಂದಲೇ ವಿಶ್ರಾಂತಿ ಪಡೆದು ಕೆಲಸ ನಿರ್ವಹಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.