
ಪಣಜಿ: ಮುಖ್ಯಮಂತ್ರಿ ಮನೋಹರ ಪರ್ರಿಕರ್ ಅವರು ಪುನಃ ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಅವರು ಪದತ್ಯಾಗ ಮಾಡಬೇಕೆಂಬ ಕೂಗು ಗೋವಾ ಬಿಜೆಪಿಯಲ್ಲಿ ಎದ್ದಿದೆ.
‘ಆಡಳಿತ ಹಾಗೂ ಅವರ ವೈಯಕ್ತಿಕ ಹಿತದೃಷ್ಟಿಯಿಂದ ಪರ್ರಿಕರ್ ಅಧಿಕಾರ ಬಿಟ್ಟು ಕೊಡುವತ್ತ ಆಲೋಚಿಸಬೇಕು. ಆದರೆ ಅಂತಿಮ ನಿರ್ಧಾರ ಅವರಿಗೆ ಬಿಟ್ಟಿದ್ದು. ಈ ಬಗ್ಗೆ ಬಿಜೆಪಿ ನಾಯಕತ್ವದೊಂದಿಗೆ ಸಮಾ ಲೋಚಿಸುತ್ತೇನೆ’ ಎಂದು ಕೇಂದ್ರ ಸಚಿವ ಶ್ರೀಪಾದ ನಾಯಕ್ ಹೇಳಿದ್ದಾರೆ.
ಅಲ್ಲದೆ, ‘ಬಿಜೆಪಿ ವರಿಷ್ಠರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದೂ ನಾಯಕ್ ತಿಳಿಸಿದ್ದಾರೆ. ಆದರೆ ನಾಯಕ್ ಹೇಳಿಕೆಯನ್ನು ಗೋವಾ ಸಿಎಂ ಕಚೇರಿ ನಿರಾಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.