ಕಾರು ಹರಿದು ಬಾಲಕಿ ಸಾವು : ಬಿಜೆಪಿ ಶಾಸಕರ ಪುತ್ರಗೆ ಜಾಮೀನು

Published : Oct 09, 2018, 01:24 PM ISTUpdated : Oct 09, 2018, 06:23 PM IST
ಕಾರು ಹರಿದು ಬಾಲಕಿ ಸಾವು : ಬಿಜೆಪಿ ಶಾಸಕರ ಪುತ್ರಗೆ ಜಾಮೀನು

ಸಾರಾಂಶ

ಬಿಜೆಪಿ ಶಾಸಕರ ಪುತ್ರನ ಕಾರು ಹರಿದು ಬಾಲಕಿಯೋರ್ವಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಷನ್ ಬೇಲ್ ಮಂಜೂರು ಮಾಡಿ ಆತನನ್ನು ಬಿಡುಗಡೆಗೊಳಿಸಲಾಗಿದೆ. ಗೋವಾ ಬಿಜೆಪಿ ಶಾಸಕರ ಪುತ್ರನಿಂದ ಬೆಳಗಾವಿಯಲ್ಲಿ ಈ ಅಪಘಾತ ನಡೆದಿತ್ತು. 

ಬೆಳಗಾವಿ  :  ಕಾರು ಹರಿದು ಬಾಲಕಿಯೋರ್ವಳು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಬಂಧಿತನಾಗಿದ್ದ ಗೋವಾ ಬಿಜೆಪಿ ಶಾಸಕರ ಪುತ್ರನಿಗೆ ಸ್ಟೇಷನ್ ಬೇಲ್ ನೀಡಿ ಬಿಡುಗಡೆ ಮಾಡಲಾಗಿದೆ. 

ಸೋಮವಾರ ಬೆಳಗಾವಿಯ ಪ್ರೂಟ್ ಮಾರ್ಕೆಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋವಾ ಬಿಜೆಪಿ ಶಾಸಕ ಗ್ಲೇನ್ ಸೋಜಾ ಪುತ್ರ ಕಾಯಿಲ್ ಟಿಕ್ಲೋ  ಎಂಬುವನಿಂದ ಈ ಅಪಘಾತ ನಡೆದಿತ್ತು. 

ರಸ್ತೆ ದಾಟುತ್ತಿದ್ದ ಇಲ್ಲಿನ ಆಜಾದ್ ನಗರದ ನಿವಾಸಿ ತೇಹನಿಯತ್ ಬಿಸ್ತಿ ಎಂಬ ಬಾಲಕಿ ಶಾಸಕರ ಪುತ್ರ ಕಾರು ಹರಿದು ಸ್ಥಳದಲ್ಲಿ ಮೃತಪಟ್ಟಿದ್ದಳು. ಅಲ್ಲದೇ ಇನ್ನೋರ್ವ ಬಾಲಕಿ ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಅಪಘಾತವಾದ ಸಂದರ್ಭದಲ್ಲಿ ಸ್ಥಳೀಯರು ಸೇರಿ ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಳಗಾವಿಯ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದ್ದು, ಮಂಗಳವಾರ ಸ್ಟೇಷನ್ ಬೇಲ್ ನೀಡಿ ಬಿಡುಗಡೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!