
ಚೆನ್ನೈ (ಮೇ.15): ಸೂಪರ್’ಸ್ಟಾರ್ ರಜನೀಕಾಂತ್ 8 ವರ್ಷಗಳ ಬಳಿಕ ಅಭಿಮಾನಿಗಳನ್ನು ಭೇಟಿ ಮಾಡಿ ಮಾತನಾಡಿದರು.
ಇಲ್ಲಿನ ರಾಘವೇಂದ್ರ ವೆಡ್ಡಿಂಗ್ ಹಾಲ್’ನಲ್ಲಿ ಅಭಿಮಾನಿಗಳ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜಕೀಯ ಸೇರುತ್ತೀರಾ ಎನ್ನುವ ಪ್ರಸ್ತಾಪ ಬಂದಾಗ’ ನನಗೆ ರಾಜಕೀಯ ಸೇರುವ ಇರಾದೆಯಿಲ್ಲ. ದೇವರು ಇಚ್ಚಿಸಿದರೆ ಹಾಗೆಯೇ ಆಗಲಿ ಎಂದರು.
ನಮ್ಮ ಜೀವನದಲ್ಲಿ ಏನೇನು ಆಗಬೇಕೆಂಬುದನ್ನು ದೇವರು ನಿರ್ಧರಿಸುತ್ತಾನೆ. ಈಗ ನಾನು ನಟನಾಗಬೇಕೆಂದು ಅವನ ಇಚ್ಚೆಯಿತ್ತು. ಹಾಗಾಗಿ ನಾನು ನಟನಾಗಿದ್ದೇನೆ. ಹಾಗೆಯೇ ನಾನು ರಾಜಕೀಯಕ್ಕೆ ಪ್ರವೇಶಿಸಬೇಕು ಅನ್ನೋದು ಅವನಿಚ್ಚೆಯಾದರೆ ನಾನು ನಾಳೆಯೇ ರಾಜಕೀಯ ಪ್ರವೇಶಿಸುತ್ತೇನೆ. ಒಂದು ವೇಳೆ ರಾಜಕೀಯ ಸೇರಿದರೆ ಬಹಳ ಪ್ರಾಮಾಣಿಕನಾಗಿ ಕೆಲಸ ಮಾಡುತ್ತೇನೆ ಎಂದು ರಜನೀಕಾಂತ್ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಜಕೀಯ ಹೊರತಾಗಿ ತನ್ನ ಅಭಿಮಾನಿಗಳಿಗೆ ಕುಡಿಯುವುದನ್ನು, ಸಿಗರೇಟು ಸೇದುವುದನ್ನು ಬಿಟ್ಟು ನಿಮ್ಮ ನಿಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸಿ. ನನ್ನ ಅನುಭವದಿಂದ ಹೇಳುತ್ತಿದ್ದೇನೆ. ಆಲ್ಕೋಹಾಲ್ ಸೇವನೆ ಕೇವಲ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲ ನಿಮ್ಮ ಯೋಚನೆ ಮತ್ತು ಕಾರ್ಯಶೈಲಿಯ ಮೇಲೆ ಪ್ರಭಾವ ಬೀರುತ್ತದೆ ಎಂದು ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.