
ಮೈಸೂರಿನಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎನ್ನುವ ವಿಚಾರ ತೀವ್ರ ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ ನಂಜನಗೂಡು, ಎಚ್.ಡಿ.ಕೋಟೆ ಹಾಗೂ ಮೈಸೂರು ತಾಲೂಕಿನ ಗಡಿಯಲ್ಲಿ ಈ ನಿಕ್ಷೇಪ ಪತ್ತೆಯಾಗಿದೆ. ಮೈಸೂರಿಗೆ ಸಮೀಪದ ಹಾಸನ ಜಿಲ್ಲೆಯಲ್ಲೂ ಚಿನ್ನದ ನಿಕ್ಷೇಪ ಇದ್ದು, ಈ ಹಿಂದೆ ಅಲ್ಲಿ ಚಿನ್ನದ ಗಣಿಗಾರಿಕೆಯೂ ನಡೆಯುತ್ತಿತ್ತು.
ಮೈಸೂರಿನಲ್ಲಿ ಚಿನ್ನ ಮತ್ತು ತಮಿಳುನಾಡಿನ ತಿರುವೂರು ಪ್ರದೇಶದಲ್ಲಿ ಕಬ್ಬಿಣದ ನಿಕ್ಷೇಪಗಳು ಕಂಡುಬಂದಿದ್ದು, ಶೋಧ ಕಾರ್ಯ ನಡೆಸಿ ಅದಿರಿನ ಗುಣಮಟ್ಟ ಮತ್ತು ಪ್ರಮಾಣದ ಕುರಿತು ವರದಿ ಸಲ್ಲಿಸುವಂತೆ ಕೆಐಒಸಿಎಲ್ಗೆ ಸೂಚಿಸಲಾಗಿದೆ ಎಂದು ಕೇಂದ್ರ ಉಕ್ಕು ಸಚಿವ ಚೌಧರಿ ಬಿರೇಂದರ್ ಸಿಂಗ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಕಬ್ಬಿಣ ಅದಿರು ಲಭ್ಯವಾದರೆ ಮಂಗಳೂರಿನ ಕೆಐಒಸಿಎಲ್ನ ಕಾರ್ಯಕ್ಷಮತೆ ಇನ್ನಷ್ಟು ವಿಸ್ತರಿಸಲು ಅನುಕೂಲವಾಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.