
ಬೆಂಗಳೂರು(ಡಿ.06): ಮೈಸೂರು ಒಡೆಯ ಯದುವೀರ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಗರದ ಇಂದಿರಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಅವರು ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ.
ಇಂದು ಬೆಳಿಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಮೈಸೂರಿನಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. 2013ರಲ್ಲಿ ಶ್ರೀಕಂಠದತ್ತ ಒಡೆಯರ ಮರಣದ ನಂತರ 2015 ರಲ್ಲಿ ಮಹಾರಾಣಿ ಪ್ರಮೋದಾ ದೇವಿ ಅವರು ತಮಗೆ ಮಕ್ಕಳಿಲ್ಲದ ಕಾರಣ ಯದುವೀರ ಅವರನ್ನು ಮೈಸೂರು ರಾಜ ವಂಶಕ್ಕೆ ದತ್ತು ತೆಗೆದುಕೊಂಡಿದ್ದರು. 2016ರಲ್ಲಿ ರಾಜಸ್ಥಾನದ ರಾಜ ವಂಶದ ತ್ರಿಷಿಕಾ ಕುಮಾರಿ ಅವರನ್ನು ವರಿಸಿದ್ದರು.ನೂರಾರು ವರ್ಷಗಳಿಂದ ಮೂಲ ವಂಶಸ್ಥರಿಗೆ ಮಕ್ಕಳಾಗಿರಲಿಲ್ಲ. ಸಾರ್ವಜನಿಕರು ಇದನ್ನು ಶಾಪ ಎಂದು ಭಾವಿಸಿದ್ದರು. ಇದೇ ಮೊದಲ ಬಾರಿಗೆ ಯದುವೀರ ಪತ್ನಿ ಮಗುವಿಗೆ ಜನ್ಮ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.