
ನವದೆಹಲಿ : ಸಂಘಟನಾ ವಲಯದ ಕಾರ್ಮಿಕರಿಗೆ ಇಲ್ಲಿದೆ ಒಂದು ಶುಭ ಸುದ್ದಿ. ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಈ ನೌಕರರ ಕನಿಷ್ಟ ಪಿಂಚಣಿಯ ಮೊತ್ತವನ್ನು ಏರಿಕೆ ಮಾಡಲು ಚಿಂತನೆ ನಡೆಸಿದೆ. ಅಲ್ಲದೇ ಪಿಂಚಣಿಯನ್ನು ದ್ವಿಗುಣ ಪ್ರಮಾಣದಲ್ಲಿ ಏರಿಕೆ ಮಾಡುವ ಸಾಧ್ಯತೆ ಇದೆ.
ಎಲ್ಲಾ ಸಂಘಟನಾ ವಲಯದ ನೌಕರರಿಗೂ ಕೂಡ ಈ ವಿಚಾರ ಅನ್ವಯವಾಗಲಿದ್ದು , ಒಂದು ವೇಳೆ ಜಾರಿಯಾದಲ್ಲಿ ಲಕ್ಷಾಂತರ ನೌಕರರು ಇದರ ಉಪಯೋಗವನ್ನು ಪಡೆದುಕೊಳ್ಳಲಿದ್ದಾರೆ.
ಮೂವರು ಸದಸ್ಯರನ್ನು ಒಳಗೊಂಡ ಸಮಿತಿಯೊಂದನ್ನು ಕಾರ್ಮಿಕ ಸಚಿವಾಲಯದಿಂದ ರಚಿಸಲಾಗಿದ್ದು, ಈ ಸಮಿತಿಯು ಸಂಘಟನಾ ವಲಯದ ಕಾರ್ಮಿಕರು ತಿಂಗಳಿಗೆ ಪಡೆಯುತ್ತಿರುವ ಪಿಂಚಣಿ ಮೊತ್ತ 1 ಸಾವಿರ ಅತ್ಯಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅವರ ಪಿಂಚಣಿ ಮೊತ್ತವನ್ನು ಏರಿಕೆ ಮಾಡುವುದು ಅತ್ಯಗತ್ಯ ಎಂದು ಹೇಳಿದೆ.
ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಂಘಟನಾ ವಲಯದ ನೌಕರರ ಪಿಂಚಣಿ ಮೊತ್ತವನ್ನು 2000ರು.ವರೆಗೂ ಕೂಡ ಏರಿಕೆ ಮಾಡುವ ಸಾಧ್ಯತೆ ಇದೆ. ಅಲ್ಲದೇ ಭವಿಷ್ಯದಲ್ಲಿ ಈ ಮೊತ್ತವು 5000 ವರೆಗೂ ಕೂಡ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಅತ್ಯಂತ ಜವಾಬ್ದಾರಿಯುತವಾಗಿದ್ದು, ಇದರಿಂದ ಬಡ ಸಂಘಟನಾ ವಲಯದ ಕೆಲಸಗಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಾಭವುಂಟಾಗಲಿದೆ ಎಂದು ಸಮಿತಿಯ ಸದಸಸ್ಯರೋರ್ವರು ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.