
ಬೆಂಗಳೂರು : ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಗಿಫ್ಟ್ ನೀಡುತ್ತಿದೆ. ಇನ್ನುಮುಂದೆ ಸರ್ಕಾರಿ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವಾರಕ್ಕೆ 5 ದಿನ ಕೆಲಸ ಹಾಗೂ 2 ದಿನ ರಜೆ ನೀಡುವ ಸಾಧ್ಯತೆ ಇದೆ.
ಈಗಾಗಲೇ 2ನೇ ಶನಿವಾರ ರಜೆ ನೀಡಲಾಗುತ್ತಿದ್ದು, ಅದರ ಜೊತೆಗೆ ನಾಲ್ಕನೇ ಶನಿವಾರವೂ ಕೂಡ ರಜೆ ನೀಡುವ ಸಾಧ್ಯತೆ ಇದೆ. 6ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸ್ಸಿಗೆ ಸರ್ಕಾರ ಚಿಂತನೆ ನಡೆಸಿದ್ದು, ಕೆಸಲದ ಅವಧಿ ಹೆಚ್ಚಳ ಮಾಡಿ ವೀಕೆಂಡ್ ರಜೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ.
"
ಇನ್ನು ಮುಂದೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಕೆಲಸದ ಅವಧಿಯಲ್ಲಿ ಏರಿಕೆ ಮಾಡುವ ಸಾಧ್ಯತೆ ಇದೆ. ಅಲ್ಲದೇ 15 ದಿನ ಸಾಂದರ್ಭಿಕರ ರಜೆಯನ್ನು ಎಂಟಕ್ಕೆ ಇಳಿಕೆ ಮಾಡುವ ಸಾಧ್ಯತೆಯೂ ಕೂಡ ಹೆಚ್ಚಿದ್ದು, ನಾನಾ ಜಯಂತಿಗಳಿಗೆ ನೀಡುವ ಸರ್ಕಾರಿ ರಜೆಯನ್ನು ಕೂಡ ಕಡಿತ ಮಾಡುವ ಸಾಧ್ಯತೆ ಇದೆ.
ಈ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.