
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ) ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ದಿಂದ ತಿರುಪತಿಗೆ ಆಗಸ್ಟ್ 18 ರಿಂದ ‘ಫ್ಲೈ ಬಸ್’ ಸೇವೆ ಆರಂಭಿಸಲು ನಿರ್ಧರಿಸಿದೆ. ಕೆಎಸ್ಸಾರ್ಟಿಸಿ ಈಗಾಗಲೇ ಕೆಐಎಎಲ್ ನಿಂದ ಮೈಸೂರು, ಮಡಿಕೇರಿ, ಕುಂದಾಪುರ, ಕೊಯಮತ್ತೂರು ಮಾರ್ಗದಲ್ಲಿ ಐಷಾರಾಮಿ ಫ್ಲೈ ಬಸ್ ಕಾರ್ಯಾಚರಣೆ ಮಾಡುತ್ತಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದೀಗ ತಿರುಪತಿ ಮಾರ್ಗಕ್ಕೂ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಫ್ಲೈ ಬಸ್ ಸೇವೆಯನ್ನು ವಿಸ್ತರಿಸಿದೆ. ಆ.18 ರಿಂದ ಪ್ರತಿ ದಿನ ಬೆಳಗ್ಗೆ ೧೦ ಮತ್ತು ರಾತ್ರಿ 10 ಕ್ಕೆ ಕೆಐಎಎಲ್ನಿಂದ ಫ್ಲೈ ಬಸ್ಗಳು ತಿರುಪತಿಗೆ ಹೊರಡಲಿವೆ. ವಯಸ್ಕ ಪ್ರಯಾಣಿಕರಿಗೆ ಟಿಕೆಟ್ ದರ 800 ನಿಗದಿಗೊಳಿಸಲಾಗಿದೆ ಎಂದು ನಿಗಮ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.