
ನವದೆಹಲಿ (ಜೂ.21) ತೈಲವನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎಂಬ ಮಾತುಗಳು ಒಂದು ಕಡೆ ಕೇಳಿಬರುತ್ತಿವೆ. ನಿರಂತರವಾಗಿ ಏರುತ್ತಿದ್ದ ತೈಲ ದರ ಕಳೆದ 15 ದಿನಗಳಲ್ಲಿ ಇಳಿಕೆ ಹಾದಿಯನ್ನು ಹಿಡಿದಿದೆ.
ಸತತ ಇಳಿಕೆ ಹಾದಿಯಲ್ಲಿದ್ದ ತೈಲ ದರ ಮತ್ತೆ ಕೊಂಚ ಇಳಿಕೆಯಾಗಿದ್ದು ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪೆಟ್ರೋಲ್ ದರ 14 ಪೈಸೆ ಕಡಿಮೆಯಾಗಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನಾಲ್ಕು ದಿನಗಳ ಹಿಂದೆ ಮಾತನಾಡುತ್ತ ತೈಲದ ಮೇಲಿನ ಅಬಕಾರಿ ಸುಂಕ ಇಳಿಸಲು ಸಾಧ್ಯವಿಲ್ಲ ಎಂದಿದ್ದರು.
ಬೆಂಗಳೂರಿನಲ್ಲಿ ದರ ಎಷ್ಟಿದೆ? ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಗೆ 77.39 ರೂ ನೀಡಬೇಕು. ಅದೆ ಒಂದು ಲೀಟರ್ ಡೀಸೆಲ್ ಗೆ 68.73 ರೂ ನೀಡಬೇಕಿದೆ. ಬೆಂಗಳೂರಿಗೆ ಹೋಲಿಕೆ ಮಾಡಿದರೆ ಕೋಲ್ಕತ್ತಾ ಮತ್ತು ಮುಂಬೈನಲ್ಲಿ ಹೆಚ್ಚಿನ ಹಣ ತೆರಬೇಕಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.