ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ 24 ಗಂಟೆಗಳಲ್ಲೇ ಆರ್ಬಿಐ ನೂತನ ಗವರ್ನರ್ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಆ ಹೊಸ ಆರ್ಬಿಐ ಗವರ್ನರ್? ಅವರ ಹಿನ್ನಲೆ ಏನು?
ನವದೆಹಲಿ, [ಡಿ.11]: ಉರ್ಜಿತ್ ಪಟೇಲ್ ರಾಜೀನಾಮೆಯಿಮದ ತೆರವಾಗಿದ್ದ ಆರ್ಬಿಐ ಗವರ್ನರ್ ಹುದ್ದೆಗೆ ಶಕ್ತಿಕಾಂತ್ ದಾಸ್ ಅವರನ್ನು ನೇಮಕ ಮಾಡಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ 24 ಗಂಟೆಗಳಲ್ಲೇ ಹೊಸದಾಗಿ ಶಕ್ತಿಕಾಂತ್ ಅವರನ್ನ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ತಮಿಳುನಾಡು ಕೇಡರ್ನ 1980ನೇ ಬ್ಯಾಚ್ ಐಎಎಸ್ ನಿವೃತ್ತ ಅಧಿಕಾರಿಯಾಗಿರುವ ಶಕ್ತಿಕಾಂತ್ ದಾಸ್, ದಿಂಡಿಗಲ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2016 ರಿಂದ 2017ರ ವರೆಗೆ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ 15ನೇ ಹಣಕಾಸು ಆಯೋಗದ ಸದಸ್ಯರಾಗಿ ನೇಮಕಗೊಂಡರು.
ಇನ್ನು ಶಕ್ತಿಕಾಂತ್ ದಾಸ್ ಅವರು, ಆದಾಯ ಕಾರ್ಯದರ್ಶಿ, ಕೇಂದ್ರ ಕಾರ್ಯದರ್ಶಿ, ಆರ್ಥಿಕ ವ್ಯವಹಾರಗಳ ಇಲಾಖೆ ಮತ್ತು ಹಣಕಾಸು ಸಚಿವಾಲಯದ ಖರ್ಚು ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಹಾಗೂ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.