ರೈತರ ಬೆಳೆಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸರ್ಕಾರ ನಿರ್ಧಾರ..?

By internet deskFirst Published Oct 3, 2016, 7:54 AM IST
Highlights

ಬೆಂಗಳೂರು(ಅ.03): ರೈತರ ಬೆಳೆಗಳಿಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಸಿಕ್ಕಿದೆ.  ನ್ಯಾಯಾಂಗ ನಿಂದನೆಯಿಂದ ಬಚಾವಾಗಲು ಸರ್ಕಾರದ ಈ ಕಸರತ್ತು ನಡೆಸಿದೆ ಎನ್ನಲಾಗಿದೆ. ಸದ್ಯ, 34 ಟಿಎಂಸಿ ನೀರಿನ ಸಂಗ್ರಹವಿದ್ದು, ರೈತರ ಬೆಳೆಗಳಿಗೆ 3 ಟಿಎಂಸಿ ನೀರು ಬಿಡುಗಡೆಗೆ ಸರ್ಕಾರದ ತೀರ್ಮಾನ ಕೈಗೊಂಡಿದೆ.

ಈ ಮೊದಲು 27 ಟಿಎಂಸಿ ನೀರು ಸಂಗ್ರಹ ಇತ್ತು. ಈಗ ಹೆಚ್ಚುವರಿ 3 ಟಿಎಂಸಿ ನೀರನ್ನು ರೈತರ ಬೆಳೆಗೆ ಹರಿಸಬಹುದು. ಈ ಬಗ್ಗೆ ಸರ್ವಾನುಮತದ ನಿರ್ಧಾರ ನಿರ್ಣಯ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದ್ದು, ಸರ್ಕಾರದ ನಿಲುವಿಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ನೀರು ಬಿಡುವುದಿಲ್ಲ ಎಂಬ ನಿರ್ಣಯವನ್ನೇ ಕೈಗೊಳ್ಳಲು ಆಗ್ರಹಿಸಿದೆ.

Latest Videos

click me!