
ಬೆಂಗಳೂರು(ಅ.11): ಆಂಧ್ರಪ್ರದೇಶದಿಂದ ನಗರಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಸರ್ಕಾರಿ ನೌಕರರೊಬ್ಬರ ಪುತ್ರನನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೆ.ಪಿ.ನಗರ 6ನೇ ಹಂತದ ನಿವಾಸಿ ಮೊಹ್ಮದ್ ತಾಹಿತ್ ಅಫ್ಜಲ್ (21) ಬಂಧಿತ. ಆರೋಪಿಯಿಂದ ಎರಡು ಕೆ.ಜಿ. ಗಾಂಜಾ, ಡಿಜಿಟಲ್ ತೂಕದ ಯಂತ್ರ, ಗಾಜಿನ ಹುಕ್ಕಾ ಪಾಟ್ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಮೊಹ್ಮದ್ ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯವಾಗಿದ್ದಾನೆ. ಈತನ ತಂದೆ ಆಂಧ್ರಪ್ರದೇಶದಲ್ಲಿ ಸರ್ಕಾರಿ ಉದ್ಯೋಗಿಯಾಗಿದ್ದಾರೆ ಎಂದು ಆರೋಪಿ ಹೇಳಿಕೆ ನೀಡಿದ್ದು, ವ್ಯಸನಿಯಾಗಿರುವ ಕಾರಣ ಹೆಚ್ಚಾಗಿ ಬಾಯಿ ಬಿಡುತ್ತಿಲ್ಲ.
ಮೊಹ್ಮದ್ ದುಮುರಿದುರ್ಗ ಗ್ರಾಮಗಳಲ್ಲಿ ಬೆಳೆದ ಗಾಂಜಾವನ್ನು ಖರೀದಿಸಿ ರೈಲು ಮೂಲಕ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ. ತನ್ನದೇ ಗುಂಪು ಕಟ್ಟಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ. ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.