
ನವದೆಹಲಿ : ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಬ್ಯಾಂಕ್ ಹಗರಣಗಳು ನಡೆಯುತ್ತಿದ್ದು, ಇದೀಗ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಯಾವುದೇ ಬ್ಯಾಂಕ್’ನಿಂದ 50 ಕೋಟಿಗಿಂತಲೂ ಅಧಿಕ ಸಾಲವನ್ನು ಪಡೆದುಕೊಳ್ಳಲು ಪಾಸ್ಪೋರ್ಟ್ ಕಡ್ಡಾಯ ಮಾಡಲಾಗಿದೆ. ಮೋಸ ವಂಚನೆಗಳನ್ನು ತಡೆಯುವ ಸಲುವಾಗಿ ಸಾಲ ಪಡೆಯಲು ಪಾಸ್ಪೋರ್ಟ್ ಕಡ್ಡಾಯ ಮಾಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಪಾಸ್ಪೋರ್ಟ್’ನಲ್ಲಿ ವ್ಯಕ್ತಿಯ ಬಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಮಾಹಿತಿ ಇರುವುದರಿಂದ ಸಾಲವನ್ನು ಮರುಪಾವತಿ ಮಾಡುವಲ್ಲಿ ಸಮಸ್ಯೆಯಾದಾಗ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ 50 ಕೋಟಿಗಿಂತಲೂ ಅಧಿಕ ಪ್ರಮಾಣದಲ್ಲಿ ಸಾಲವನ್ನು ಪಡೆದುಕೊಳ್ಳಲು ಪಾಸ್ಪೋರ್ಟ್ ಕಡ್ಡಾಯ ಮಾಡಲಾಗುತ್ತಿದೆ.
ಸೂಕ್ತ ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳಲು ವಂಚನೆಯನ್ನು ತಡೆಯಲು ಈ ನೂತನ ಕ್ರಮವು ಸಹಕಾರಿಯಾಗುತ್ತದೆ ಎಂದು ಫೈನಾನ್ಸಿಯಲ್ ಸರ್ವೀಸಸ್ ಸೆಕ್ರೆಟರಿ ರಾಜೀವ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.