
ನವದೆಹಲಿ (ಏ.07): ಏರ್ ಇಂಡಿಯಾ ಅಧಿಕಾರಿ ಮೇಲೆ ಹಲ್ಲೆ ನಡೆಸಿ ವಿಮಾನಯಾನ ಸಂಸ್ಥೆಗಳಿಂದ ನಿಷೇಧಕ್ಕೊಳಗಾಗಿರುವ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್’ ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಕೇಂದ್ರ ಸರ್ಕಾರ ಇಂದು ಗಾಯಕ್ವಾಡ್ ಬೆಂಬಲಕ್ಕೆ ಬಂದಿದ್ದು, ನಿಷೇಧವನ್ನು ಹಿಂಪಡೆಯಲು ಏರ್ ಇಂಡಿಯಾ ಸಂಸ್ಥೆಗೆ ಆದೇಶಿಸಿದೆ.
ಕೇಂದ್ರ ವಿಮಾನಯಾನ ಇಲಾಖೆಯು ಈ ಕುರಿತು ಏರ್ ಇಂಡಿಯಾ ವ್ಯವಸ್ಥಾಪನಾ ಮಂಡಳಿ ಜತೆ ಸಭೆ ನಡೆಸಿದ್ದು, ರವೀಂದ್ರ ಗಾಯಕ್ವಾಡ್ ಸಿಬ್ಬಂದಿಯ ಕ್ಷಮೆ ಯಾಚಿಸಬೇಕು ಎಂದು ಏರ್ ಇಂಡಿಯಾ ಪಟ್ಟುಹಿಡಿದಿದೆ. ಆದರೆ ಅದನ್ನು ಮಾನ್ಯ ಮಾಡದ ಸರ್ಕಾರ, ನಿಷೇಧ ಹಿಂಪಡೆಯುವಂತೆ ಏರ್ ಇಂಡಿಯಾಗೆ ಸೂಚಿಸಿದೆ.
ನಿನ್ನೆ ಸಚಿವ ಗಜಪತಿ ರಾಜು ಅವರಿಗೆ ಬರೆದಿರುವ ಪತ್ರದಲ್ಲಿ ರವೀಂದ್ರ ಗಾಯಕ್ವಾಡ್ ವಿಷಾದ ವ್ಯಕ್ತಪಡಿಸಿದ್ದರಲ್ಲದೇ ಇನ್ಮುಂದೆ ಅಂತಹ ಕೃತ್ಯ ಪುನರಾವರ್ತಿಸುವುದಿಲ್ಲವೆಂದು ಹೇಳಿದ್ದರು. ಏರ್ ಇಂಡಿಯಾ ನಿಷೇಧ ಹಿಂಪಡೆದ ಬೆನ್ನಲ್ಲಿ ಇತರ ವಿಮಾನಯಾನ ಸಂಸ್ಥೆಗಳು ಕೂಡಾ ನಿಷೇಧವನ್ನು ಹಿಂಪಡೆಯುವುದು ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.