ದಾರಿ ತಪ್ಪಿಸುವ ಜಾಹೀರಾತುಗಳಿಗೆ ಬಿಸಿ ಮುಟ್ಟಿಸಲು ಮೋದಿ ಸ್ಕೆಚ್ಚು..!

Published : Oct 27, 2017, 12:10 PM ISTUpdated : Apr 11, 2018, 12:53 PM IST
ದಾರಿ ತಪ್ಪಿಸುವ ಜಾಹೀರಾತುಗಳಿಗೆ ಬಿಸಿ ಮುಟ್ಟಿಸಲು ಮೋದಿ ಸ್ಕೆಚ್ಚು..!

ಸಾರಾಂಶ

ವ್ಯವಹಾರ ಶೈಲಿ ಹಾಗೂ ದೇಶದ ಅಗತ್ಯಕ್ಕೆ ಅನುಗುಣವಾಗಿ ಗ್ರಾಹಕ ರಕ್ಷಣಾ ಕಾಯ್ದೆ ರಚಿಸುವ ಪ್ರಕ್ರಿಯೆ ನಡೆಯುತ್ತಿದೆ.

ನವದೆಹಲಿ(ಅ.27): ದಾರಿ ತಪ್ಪಿಸುವ ಜಾಹೀರಾತುಗಳನ್ನು ಮಟ್ಟಹಾಕಲು ಹಾಗೂ ಕಾಲಮಿತಿಯೊಳಗೆ, ಅಗ್ಗದ ವೆಚ್ಚದಲ್ಲಿ ಗ್ರಾಹಕ ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಲು ಹೊಸ ಗ್ರಾಹಕ ರಕ್ಷಣಾ ಕಾಯ್ದೆ ರೂಪಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ವ್ಯವಹಾರ ಶೈಲಿ ಹಾಗೂ ದೇಶದ ಅಗತ್ಯಕ್ಕೆ ಅನುಗುಣವಾಗಿ ಗ್ರಾಹಕ ರಕ್ಷಣಾ ಕಾಯ್ದೆ ರಚಿಸುವ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಹಕರ ಸಬಲೀಕರಣಕ್ಕೆ ಉದ್ದೇಶಿತ ಕಾಯ್ದೆ ಹೆಚ್ಚಿನ ಒತ್ತು ನೀಡಲಿದೆ. ದಾರಿ ತಪ್ಪಿಸುವ ಜಾಹೀರಾತುಗಳ ಕಠಿಣ ಅಂಶಗಳು ಇದರಲ್ಲಿರಲಿವೆ. ಕ್ರಮ ಜರುಗಿಸುವ ಅಧಿಕಾರವುಳ್ಳ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರವನ್ನು ತೆರೆದು, ಬೇಗನೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಾಯ್ದೆಯಿಂದ ದೀರ್ಘಾವಧಿಯಲ್ಲಿ ಗ್ರಾಹಕರಿಗೆ ಅನುಕೂಲವಾಗಲಿದೆ. ಉತ್ಪಾದಕರ ನಡುವೆಯೇ ಸ್ಪರ್ಧೆ ಏರ್ಪಟ್ಟು ಬೆಲೆಗಳು ಇಳಿಕೆ ಕಾಣಲಿವೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನ: ಸ್ನೇಹಿತರಿಂದಲೇ ರೌಡಿ ಶೀಟರ್‌ ಜೆಸಿಬಿ ಮಂಜು ಹತ್ಯೆಗೆ ಯತ್ನ, ರಕ್ತದ ಮಡುವಲ್ಲಿ ನರಳಾಡಿದ ಮಂಜ
ಪ್ರತಿ ಟ್ವೀಟ್‌ಗೆ ಗರಿಷ್ಠ ಲೈಕ್ಸ್ , ಭಾರತದಲ್ಲಿ ನಂ.1 ಪ್ರಧಾನಿ ಮೋದಿ, ನಂತರದ ಸ್ಥಾನ ಯಾರಿಗೆ?