
ನವದೆಹಲಿ(ಮಾ.22): ಹುತಾತ್ಮ ಯೋಧರ ಮಕ್ಕಳ ಶಿಕ್ಷಣಕ್ಕೆ ಕೇಂದ್ರ ಸರ್ಕಾರವು ಸೂಪರ್ ಬಂಪರ್ ನೀಡಿದೆ.
ಈ ಮೊದಲು ತಿಂಗಳಿಗೆ ರಿಯಾಯಿತಿ ಶಿಕ್ಷಣ ಹೆಸರಿನಲ್ಲಿ 10 ಸಾವಿರ ರೂ.ವರೆಗೆ ಮಾತ್ರ ನೆರವು ನೀಡಲಾಗುತ್ತಿತ್ತು. ಈಗ ಅದನ್ನು ಬದಲಾಯಿಸಿ ಸಂಪೂರ್ಣ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಮೂರು ದಳಗಳ ಸೇನಾ ಅಧಿಕಾರಿಗಳು, ಅಧಿಕಾರಿಗಳು ಕೆಳಗಿನ ಶ್ರೇಣಿ ಹಾಗೂ ಕಾರ್ಯಾಚರಣೆಯಲ್ಲಿ ಹತರಾದ ಹಾಗೂ ಗಾಯಗೊಂಡ ಮಕ್ಕಳು ಈ ಯೋಜನೆಗೆ ಅನ್ವಯರಾಗುತ್ತಾರೆ. ಈ ಯೋಜನೆಯಡಿ 3400 ಮಕ್ಕಳು ಒಳಗೊಳ್ಳುತ್ತಾರೆ. ವಾರ್ಷಿಕ 5 ಕೋಟಿ ರೂ.ನೆರವು ನೀಡಲು ಸರ್ಕಾರ ಮುಂದಾಗಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ, ಶೈಕ್ಷಣಿಕ ಸಂಸ್ಥೆ, ಮಿಲಿಟರಿ, ಸೈನಿಕ ಶಾಲೆಗಳು ಹಾಗೂ ಇತರ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಯತ್ತ ಸಂಸ್ಥೆಗಳು ಒಳಗೊಳ್ಳುತ್ತವೆ' ಎಂದು ರಕ್ಷಣಾ ಇಲಾಖೆ ಟ್ವಿಟರ್'ನಲ್ಲಿ ತನ್ನ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.